ತಾಲ್ಲೂಕಿನ ವ್ಯಾಪ್ತಿಯಲ್ಲಿ ಬಹುತೇಕ ಕೆರೆ, ಹಳ್ಳಕೊಳ್ಳಗಳು, ಕೊಳವೆಬಾವಿಗಳಲ್ಲಿ ನೀರಿಲ್ಲದೆ ಶೇ 90ರಷ್ಟು ರೈತರು ತೋಟಗಳಿಗೆ ನೀರು ಹಾಯಿಸಲು ಸಾಧ್ಯವಾಗದೆ ಪರದಾಡುತ್ತಿದ್ದರು. ಮಳೆ ಬಂದಿರುವುದರಿಂದ ತೋಟಗಳಿಗೆ ನೀರು ಹಾಯಿಸುವುದು ತಪ್ಪಿದೆ. ಮಳೆಯಿಲ್ಲದಿದ್ದರಿಂದ ಬಿಸಿಲಿನ ತಾಪಮಾನಕ್ಕೆ ಹೆದರಿ ಖುಷ್ಕಿ ಜಮೀನಿನಲ್ಲಿ ಬೆಳೆಯಲಾಗುತ್ತಿದ್ದ ಹಂಕಲು ಬೆಳೆಗಳನ್ನು ಬೆಳೆಯಲು ರೈತರು ಹಿಂದೇಟು ಹಾಕಿದ್ದರು. ಮಳೆ ಬಂದಿರುವುದರಿಂದ ಶುಂಠಿ, ಸುವರ್ಣಗೆಡ್ಡೆ ಮತ್ತಿತರ ಬೆಳೆಗಳನ್ನು ಬೆಳೆಲು ರೈತರಿಗೆ ಅನುಕೂಲವಾಗಿದೆ.