<p><strong>ಬೆಂಗಳೂರು:</strong> ರಾಜ್ಯದಲ್ಲಿ ಶನಿವಾರ ಚಿಕ್ಕಮಗಳೂರು, ವಿಜಯಪುರ, ಚಿತ್ರದುರ್ಗ, ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.</p>.<p>ದಾಂಡೇಲಿಯ ಅಂಬೇವಾಡಿಯಿಂದ ಕಿರವತ್ತಿ ಗ್ರೀಡ್ಗೆ ವಿದ್ಯುತ್ ಸರಬರಾಜು ಮಾಡುವ ಮಾರ್ಗದಲ್ಲಿ ಸಮಸ್ಯೆ ಕಂಡುಬಂದಿರುವುದರಿಂದ, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಲೆನಾಡು ಮತ್ತು ಬಯಲುಸೀಮೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಅಜ್ಜಂಪುರ ಬಳಿ ಬಗ್ಗವಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಚಾವಣಿಗೆ ಹಾಕಿದ್ದ ತಗಡಿನ ಶೀಟ್ಗಳು ಗಾಳಿ-ಮಳೆಗೆ ಹಾರಿವೆ.</p>.<p>ಧಾರವಾಡ, ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಆಲಿಕಲ್ಲು ಮಳೆಯಾಗಿದೆ. ಹಾವೇರಿ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ತಾಳಿಕೋಟೆಯಲ್ಲಿಬಿರುಗಾಳಿಗೆ ಬೇವಿನ ಮರ ಬಿದ್ದಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ಬಿರುಸಿನ ಮಳೆ ಸುರಿಯಿತು. ದುಗ್ಗಾವರದ ಕೆರೆ<br />ಭರ್ತಿಯಾಗಿದ್ದು, ದೇವಪುರದ ಕೆರೆ ಕಡೆಗೆ ನೀರು ಹರಿಯುತ್ತಿದೆ.</p>.<p>ಭರಮಸಾಗರದಲ್ಲಿ ಆಲಿಕಲ್ಲು ಮಳೆ ಸುರಿದಿದೆ.ದಾವಣಗೆರೆ ಜಿಲ್ಲೆಯ ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಿತು. ನ್ಯಾಮತಿ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಶನಿವಾರ ಚಿಕ್ಕಮಗಳೂರು, ವಿಜಯಪುರ, ಚಿತ್ರದುರ್ಗ, ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.</p>.<p>ದಾಂಡೇಲಿಯ ಅಂಬೇವಾಡಿಯಿಂದ ಕಿರವತ್ತಿ ಗ್ರೀಡ್ಗೆ ವಿದ್ಯುತ್ ಸರಬರಾಜು ಮಾಡುವ ಮಾರ್ಗದಲ್ಲಿ ಸಮಸ್ಯೆ ಕಂಡುಬಂದಿರುವುದರಿಂದ, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಲೆನಾಡು ಮತ್ತು ಬಯಲುಸೀಮೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಅಜ್ಜಂಪುರ ಬಳಿ ಬಗ್ಗವಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಚಾವಣಿಗೆ ಹಾಕಿದ್ದ ತಗಡಿನ ಶೀಟ್ಗಳು ಗಾಳಿ-ಮಳೆಗೆ ಹಾರಿವೆ.</p>.<p>ಧಾರವಾಡ, ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಆಲಿಕಲ್ಲು ಮಳೆಯಾಗಿದೆ. ಹಾವೇರಿ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ತಾಳಿಕೋಟೆಯಲ್ಲಿಬಿರುಗಾಳಿಗೆ ಬೇವಿನ ಮರ ಬಿದ್ದಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ಬಿರುಸಿನ ಮಳೆ ಸುರಿಯಿತು. ದುಗ್ಗಾವರದ ಕೆರೆ<br />ಭರ್ತಿಯಾಗಿದ್ದು, ದೇವಪುರದ ಕೆರೆ ಕಡೆಗೆ ನೀರು ಹರಿಯುತ್ತಿದೆ.</p>.<p>ಭರಮಸಾಗರದಲ್ಲಿ ಆಲಿಕಲ್ಲು ಮಳೆ ಸುರಿದಿದೆ.ದಾವಣಗೆರೆ ಜಿಲ್ಲೆಯ ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಿತು. ನ್ಯಾಮತಿ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>