ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೂರು: ಅಂಗಡಿಗಳಿಗೆ ನುಗ್ಗಿದ ನೀರು

Last Updated 21 ಫೆಬ್ರುವರಿ 2021, 16:28 IST
ಅಕ್ಷರ ಗಾತ್ರ

ಕಡೂರು: ತಾಲ್ಲೂಕಿನಲ್ಲಿ ಭಾನುವಾರ ಬಿರುಸಿನ ಮಳೆಯಾಗಿದೆ. ಮಧ್ಯಾಹ್ನ ಒಂದು ಗಂಟೆ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಬಿಡುವು ನೀಡದೆ ಸುರಿಯಿತು.

ಪಟ್ಟಣದಲ್ಲಿ ರಸ್ತೆಗಳ ಮೇಲೆ ಒಂದು ಅಡಿಗೂ ಹೆಚ್ಚು ನೀರು ಹರಿಯಿತು. ದಿಢೀರನೆ ಸುರಿಯಲಾರಂಭಿಸಿದ ಮಳೆಗೆ ಜನರು ಕಕ್ಕಾಬಿಕ್ಕಿಯಾಗಿ ಅಂಗಡಿ ಮುಂಗಟ್ಟುಗಳ ಮುಂದೆ ಅಶ್ರಯ ಪಡೆದರು.

ಮಳೆ ನೀರು ನೆಲ ಅಂತಸ್ತುಗಳಲ್ಲಿದ್ದ ಅಂಗಡಿಗಳಿಗೂ ನುಗ್ಗಿತು. ಬಸವೇಶ್ವರ ವೃತ್ತದಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಕಟ್ಟಡದ ಕೆಳಭಾಗದಲ್ಲಿರುವ ಮಂಗಲ್ ದೀಪ್ ಬಟ್ಟೆ ಅಂಗಡಿಗೆ ನೀರು ನುಗ್ಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿಯೂ ವ್ಯಾಪಕವಾಗಿ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT