<p><strong>ಕಳಸ</strong>: ₹ 6 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹೊರನಾಡು- ಬಲಿಗೆ ರಸ್ತೆ ಕಾಮಗಾರಿ ನಿಗದಿಯಂತೆ ಮಳೆಗಾಲದ ಒಳಗೆ ಮುಗಿಯುವುದು ಅಸಾಧ್ಯವೇ ಆಗಿದೆ. ಇದರಿಂದಾಗಿ ಅಲ್ಲಿನ ಗ್ರಾಮಸ್ಥರು ಬೇಸರಗೊಂಡಿದ್ದಾರೆ.</p>.<p>‘2 ವರ್ಷದಿಂದ ಕೆಲಸ ಮಾಡ್ತಾನೇ ಇದ್ದಾರೆ. ಇನ್ನೂ ಮುಗಿಯುವ ಹಾಗೆ ಕಾಣುತ್ತಿಲ್ಲ' ಎಂದು ಬಹುತೇಕ ಗ್ರಾಮಸ್ಥರು ದೂರುತ್ತಾರೆ.</p>.<p>‘ಕಾಮಗಾರಿಯ ಕೊನೆ ಹಂತದಲ್ಲಿ ಗುತ್ತಿಗೆದಾರರು ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಅಲ್ಲಲ್ಲಿ ಡಾಂಬರು ಕಿತ್ತು ಬರುತ್ತಿದೆ’ ಎಂಬ ದೂರು ಚಿಕ್ಕನಕೊಡಿಗೆ, ಬಲಿಗೆ ಗ್ರಾಮದಲ್ಲಿ ವ್ಯಾಪಕವಾಗಿ ಇದೆ.</p>.<p>‘ರಸ್ತೆಯು ಹೊರನಾಡು ತಲುಪುವ ಒಳಗೆ ಕೆಲ ಖಾಸಗಿ ವ್ಯಕ್ತಿಗಳ ಜಮೀನು ಮೂಲಕ ಹಾದುಹೋಗಬೇಕಿದೆ. ಆದರೆ, ಈ ಜಮೀನಿನಲ್ಲಿ ಈವರೆಗೂ ರಸ್ತೆ ಕಾಮಗಾರಿ ಆರಂಭಗೊಂಡಿಲ್ಲ. ಇದು ರಸ್ತೆ ಕಾಮಗಾರಿ ಇನ್ನಷ್ಟು ವಿಳಂಬ ಆಗುವ ಭಯ ಮೂಡಿಸಿದೆ’ ಎಂದು ಜೆಡಿಎಸ್ ಮುಖಂಡ ಪ್ರಸಾದ್ ಜೈನ್ ಬಲಿಗೆ ಹೇಳುತ್ತಾರೆ.</p>.<p>ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್ ಮಂಜುನಾಥ್ ಅವರನ್ನು 'ಪ್ರಜಾವಾಣಿ' ಮಾತನಾಡಿಸಿದಾಗ ‘ಲಾಕ್ಡೌನ್ ಕಾರಣಕ್ಕೆ ಒಂದೂವರೆ ತಿಂಗಳು ಕೆಲಸ ನಿಂತು ಹೋಯಿತು. ಇದೀಗ ಹೊರನಾಡಿನ ಜಿ.ಭೀಮೇಶ್ವರ ಜೋಷಿ ತಮ್ಮ ಕುಟುಂಬದ ಜಮೀನಿನಲ್ಲಿ ರಸ್ತೆ ಮಧ್ಯದಿಂದ 5 ಮೀಟರ್ ಅಗಲಕ್ಕೆ ವಿಸ್ತರಿಸಲು ಒಪ್ಪಿದಾರೆ. ಮಳೆಗಾಲದ ಒಳಗೆ ಸಂಪೂರ್ಣವಾಗಿ ಜಲ್ಲಿ ಹಾಕಿ ಮುಂದಿನ ಜನವರಿ ಒಳಗೆ ಡಾಂಬರೀಕರಣದ ಕೆಲಸವನ್ನು ಸಂಪೂರ್ಣವಾಗಿ ಮುಗಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಏನೇ ಸಮಸ್ಯೆ ಇದ್ದರೂ ಬಗೆಹರಿಸಿ ನಮಗೆ ಮಳೆಗಾಲದ ಒಳಗೆ ರಸ್ತೆಯನ್ನು ನಿಗದಿಯಂತೆ ವಿಸ್ತರಣೆ ಮಾಡಿ, ಜಲ್ಲಿ ಹಾಕಿಕೊಟ್ಟರೆ ಮಳೆಗಾಲದಲ್ಲಿ ಓಡಾಡಲು ಅನುಕೂಲ ಆಗುತ್ತದೆ. ಇಲ್ಲದಿದ್ದರೆ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರಿಗೆ ಭಾರಿ ಕಷ್ಟ ಆಗುತ್ತದೆ’ ಎಂದು ಗ್ರಾಮಸ್ಥರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ₹ 6 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹೊರನಾಡು- ಬಲಿಗೆ ರಸ್ತೆ ಕಾಮಗಾರಿ ನಿಗದಿಯಂತೆ ಮಳೆಗಾಲದ ಒಳಗೆ ಮುಗಿಯುವುದು ಅಸಾಧ್ಯವೇ ಆಗಿದೆ. ಇದರಿಂದಾಗಿ ಅಲ್ಲಿನ ಗ್ರಾಮಸ್ಥರು ಬೇಸರಗೊಂಡಿದ್ದಾರೆ.</p>.<p>‘2 ವರ್ಷದಿಂದ ಕೆಲಸ ಮಾಡ್ತಾನೇ ಇದ್ದಾರೆ. ಇನ್ನೂ ಮುಗಿಯುವ ಹಾಗೆ ಕಾಣುತ್ತಿಲ್ಲ' ಎಂದು ಬಹುತೇಕ ಗ್ರಾಮಸ್ಥರು ದೂರುತ್ತಾರೆ.</p>.<p>‘ಕಾಮಗಾರಿಯ ಕೊನೆ ಹಂತದಲ್ಲಿ ಗುತ್ತಿಗೆದಾರರು ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಅಲ್ಲಲ್ಲಿ ಡಾಂಬರು ಕಿತ್ತು ಬರುತ್ತಿದೆ’ ಎಂಬ ದೂರು ಚಿಕ್ಕನಕೊಡಿಗೆ, ಬಲಿಗೆ ಗ್ರಾಮದಲ್ಲಿ ವ್ಯಾಪಕವಾಗಿ ಇದೆ.</p>.<p>‘ರಸ್ತೆಯು ಹೊರನಾಡು ತಲುಪುವ ಒಳಗೆ ಕೆಲ ಖಾಸಗಿ ವ್ಯಕ್ತಿಗಳ ಜಮೀನು ಮೂಲಕ ಹಾದುಹೋಗಬೇಕಿದೆ. ಆದರೆ, ಈ ಜಮೀನಿನಲ್ಲಿ ಈವರೆಗೂ ರಸ್ತೆ ಕಾಮಗಾರಿ ಆರಂಭಗೊಂಡಿಲ್ಲ. ಇದು ರಸ್ತೆ ಕಾಮಗಾರಿ ಇನ್ನಷ್ಟು ವಿಳಂಬ ಆಗುವ ಭಯ ಮೂಡಿಸಿದೆ’ ಎಂದು ಜೆಡಿಎಸ್ ಮುಖಂಡ ಪ್ರಸಾದ್ ಜೈನ್ ಬಲಿಗೆ ಹೇಳುತ್ತಾರೆ.</p>.<p>ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್ ಮಂಜುನಾಥ್ ಅವರನ್ನು 'ಪ್ರಜಾವಾಣಿ' ಮಾತನಾಡಿಸಿದಾಗ ‘ಲಾಕ್ಡೌನ್ ಕಾರಣಕ್ಕೆ ಒಂದೂವರೆ ತಿಂಗಳು ಕೆಲಸ ನಿಂತು ಹೋಯಿತು. ಇದೀಗ ಹೊರನಾಡಿನ ಜಿ.ಭೀಮೇಶ್ವರ ಜೋಷಿ ತಮ್ಮ ಕುಟುಂಬದ ಜಮೀನಿನಲ್ಲಿ ರಸ್ತೆ ಮಧ್ಯದಿಂದ 5 ಮೀಟರ್ ಅಗಲಕ್ಕೆ ವಿಸ್ತರಿಸಲು ಒಪ್ಪಿದಾರೆ. ಮಳೆಗಾಲದ ಒಳಗೆ ಸಂಪೂರ್ಣವಾಗಿ ಜಲ್ಲಿ ಹಾಕಿ ಮುಂದಿನ ಜನವರಿ ಒಳಗೆ ಡಾಂಬರೀಕರಣದ ಕೆಲಸವನ್ನು ಸಂಪೂರ್ಣವಾಗಿ ಮುಗಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಏನೇ ಸಮಸ್ಯೆ ಇದ್ದರೂ ಬಗೆಹರಿಸಿ ನಮಗೆ ಮಳೆಗಾಲದ ಒಳಗೆ ರಸ್ತೆಯನ್ನು ನಿಗದಿಯಂತೆ ವಿಸ್ತರಣೆ ಮಾಡಿ, ಜಲ್ಲಿ ಹಾಕಿಕೊಟ್ಟರೆ ಮಳೆಗಾಲದಲ್ಲಿ ಓಡಾಡಲು ಅನುಕೂಲ ಆಗುತ್ತದೆ. ಇಲ್ಲದಿದ್ದರೆ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರಿಗೆ ಭಾರಿ ಕಷ್ಟ ಆಗುತ್ತದೆ’ ಎಂದು ಗ್ರಾಮಸ್ಥರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>