ತಾಲ್ಲೂಕು ಘಟಕದ ಅಧ್ಯಕ್ಷೆ ತುಳಸಿ ಗೌಡ ಮಾತನಾಡಿ, ‘ದೇಶದ ಬೆನ್ನೆಲುಬಾದ ರೈತನ ಬೆನ್ನೆಲುಬನ್ನೇ ಸರ್ಕಾರಗಳು ತಮ್ಮ ನೀತಿಯ ಮೂಲಕ ಮುರಿಯುತ್ತಿವೆ. ಕಾಫಿ ಬೆಳೆಗಾರರಿಂದ ಸರ್ಕಾರಕ್ಕೆ ವಾರ್ಷಿಕ ₹9,000 ಕೋಟಿ ಆದಾಯ ಬರುತ್ತಿತ್ತು. ಆದರೆ, ಈ ವರ್ಷ ಅತಿವೃಷ್ಟಿಯಿಂದ ತೀವ್ರ ನಷ್ಟ ಅನುಭವಿಸುವಂತಾಗಿದೆ. ಕಾಫಿ ಬೆಳೆಗಾರರಸರ್ಕಾರದ ವಿರುದ್ಧವಾಗಿ ಇಲ್ಲ, ಆದರೆ ವಿಳಂಬ ನೀತಿಯ ಕುರಿತು ನಾವು ಪ್ರತಿಭಟನೆ ನಡೆಸಿದ್ದೇವೆ. ಬೆಳೆಹಾನಿ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಿ, ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.