‘ದೆಹಲಿಯಲ್ಲಿ ಪ್ರಧಾನಿ, ರಾಜ್ಯದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಭಾಷಣ ಮುಗಿಸಿದ ನಂತರ, ರಾಷ್ಟ್ರಧ್ವಜ, ರೈತ ಸಂಘದ ಬಾವುಟ ಕಟ್ಟಿದ ಸಾವಿರಾರು ವಾಹನಗಳಲ್ಲಿ ರೈತರು ದೆಹಲಿ ಹಾಗೂ ಬೆಂಗಳೂರನ್ನು ಪ್ರವೇಶ ಮಾಡುವರು. ರೈತರ ಸಂಕಷ್ಟ ಬಿಂಬಿಸುವ ಟ್ಯಾಬ್ಲೊಗಳು ಮೆರವಣಿಗೆಯಲ್ಲಿ ಇರಲಿವೆ. ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಘೋಷಣೆ ಕೂಗುವರು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.