<p><strong>ಚಿಕ್ಕಮಗಳೂರು</strong>: ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈಗ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಮೂಲಕ ನಿರೀಕ್ಷೆ ಹುಸಿಗೊಳಿಸಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ಉಸ್ತುವಾರಿ ಕೆ.ಸುಂದರಗೌಡ ಟೀಕಿಸಿದ್ದಾರೆ.</p>.<p>ರಾಜ್ಯದಲ್ಲಿ ಛಾಪಾಕಾಗದ, ವಿದ್ಯುತ್ ಶುಲ್ಕ ಏರಿಕೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣದ ಹಗರಣ ಬೆಳಕಿಗೆ ಬಂದಿದೆ. ಈ ನಡುವೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ. ದೈನಂದಿನ ಜೀವನದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯಿಂದ ಬಡವರು, ಸಾಮಾನ್ಯ ವರ್ಗದವರಿಗೆ ದೊಡ್ಡ ಪೆಟ್ಟು ಬೀಳಲಿದೆ. ಈ ಮೂಲಕ ಸರ್ಕಾರ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ದೂಷಿಸಿದ್ದಾರೆ.</p>.<p>ದೆಹಲಿ ಸರ್ಕಾರ ಉಚಿತ ಯೋಜನೆಗಳನ್ನು ನೀಡಿದರೂ ಯಾವುದೇ ತೆರಿಗೆ ಹೆಚ್ಚಳ ಮಾಡಿಲ್ಲ. ಶಿಕ್ಷಣ, ಆರೋಗ್ಯ ಮತ್ತು ಸಾರಿಗೆ ಸವಲತ್ತುಗಳನ್ನು ನೀಡಿ ಮಾದರಿಯಾಗಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈಗ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಮೂಲಕ ನಿರೀಕ್ಷೆ ಹುಸಿಗೊಳಿಸಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ಉಸ್ತುವಾರಿ ಕೆ.ಸುಂದರಗೌಡ ಟೀಕಿಸಿದ್ದಾರೆ.</p>.<p>ರಾಜ್ಯದಲ್ಲಿ ಛಾಪಾಕಾಗದ, ವಿದ್ಯುತ್ ಶುಲ್ಕ ಏರಿಕೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣದ ಹಗರಣ ಬೆಳಕಿಗೆ ಬಂದಿದೆ. ಈ ನಡುವೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ. ದೈನಂದಿನ ಜೀವನದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯಿಂದ ಬಡವರು, ಸಾಮಾನ್ಯ ವರ್ಗದವರಿಗೆ ದೊಡ್ಡ ಪೆಟ್ಟು ಬೀಳಲಿದೆ. ಈ ಮೂಲಕ ಸರ್ಕಾರ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ದೂಷಿಸಿದ್ದಾರೆ.</p>.<p>ದೆಹಲಿ ಸರ್ಕಾರ ಉಚಿತ ಯೋಜನೆಗಳನ್ನು ನೀಡಿದರೂ ಯಾವುದೇ ತೆರಿಗೆ ಹೆಚ್ಚಳ ಮಾಡಿಲ್ಲ. ಶಿಕ್ಷಣ, ಆರೋಗ್ಯ ಮತ್ತು ಸಾರಿಗೆ ಸವಲತ್ತುಗಳನ್ನು ನೀಡಿ ಮಾದರಿಯಾಗಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>