ಪ್ರಸ್ತುತ ಬೆಂಗಳೂರಿನ ಕ್ರೀಡಾ ಹಾಸ್ಟೆಲ್ನಲ್ಲಿ ಇರುವ ರಕ್ಷಿತಾ ಪಿಯುಸಿ ವಿದ್ಯಾರ್ಥಿನಿ. ಕ್ರೀಡಾ ತರಬೇತುದಾರ ರಾಹುಲ್ ಬಾಲಕೃಷ್ಣ, ಗೋವಿಂದ್, ಸೌಮ್ಯ ಸಾವಂತ್, ತಬರೇಶ್ ತರಬೇತಿ ಅಡಿ ಪಳಗಿದ್ದಾರೆ. 2018ರಲ್ಲಿ ಜಕಾರ್ತಾದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಅಥ್ಲೆಟಿಕ್ ವಿಭಾಗದಲ್ಲಿ 1,500ಮೀ ಓಟದಲ್ಲಿ ಚಿನ್ನದ ಪದಕ ಪಡೆದರು. 2020ರಲ್ಲಿ ಟೋಕಿಯೊ ಅಂತರ ರಾಷ್ಟ್ರೀಯ ಪ್ಯಾರಾಲಿಂಪಿಕ್ಸ್ಗೆ ಆಯ್ಕೆಯಾಗಿದ್ದರು. ಆದರೆ ಕೋವಿಡ್ ಕಾರಣ ಅವಕಾಶ ಕೈ ತಪ್ಪಿತ್ತು.