ಚಿಕ್ಕಮಗಳೂರು: ಇಲ್ಲಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮಂಗಳವಾರ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿಗೆ ಚಿಕಿತ್ಸೆಗೆ ತೆರಳಿದ್ದಾರೆ.
ಸ್ವಾಮೀಜಿಗೆ ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಪಟ್ಟಣದ ಆರೋಗ್ಯ ಕೇಂದ್ರದ ವೈದ್ಯರು ಮಂಗಳವಾರ ಮಾದರಿ ಪರೀಕ್ಷೆ ಮಾಡಿದ್ದು, ಕೊರೊನಾ ಸೋಂಕು ಖಾತರಿಯಾಗಿದೆ.
‘ಜ್ವರಕ್ಕೆ ಚಿಕಿತ್ಸೆ ಪಡೆದಿದ್ದು ಕಡಿಮೆಯಾಗಿದೆ. ಲಕ್ಷಣಗಳು ಇಲ್ಲ, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗುತ್ತೇನೆ’ ಎಂದು ರಂಭಾಪುರಿಶ್ರೀ ‘ಪ್ರಜಾವಾಣಿ’ಗೆ ತಿಳಿಸಿದರು.