<p><strong>ಚಿಕ್ಕಮಗಳೂರು</strong>: 14 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಸತೀಶ (20) ಎಂಬಾತಗೆ 20 ವರ್ಷ ಜೈಲು, ₹ 50 ಸಾವಿರ ದಂಡವನ್ನು ನಗರದ ಎಫ್ಟಿಎಸ್ಸಿ–1(ಪೊಕ್ಸೊ) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದೆ.</p>.<p>ನ್ಯಾಯಾಧೀಶರಾದ ವಿನುತಾ ಪಿ.ಶೆಟ್ಟಿ ಅವರು ಈ ಆದೇಶ ನೀಡಿದ್ದಾರೆ. ಬಾಲಕಿಗೆ ₹ 1.60 ಲಕ್ಷ ಪರಿಹಾರ ಧನ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಏನಿದು ಪ್ರಕರಣ: 2020ರ ಮೇ 15ರಂದು ಪ್ರಕರಣ ನಡೆದಿತ್ತು. ಸತೀಶ ಬೆಂಗಳೂರಿನ ಡಾಬಸ್ಪೇಟೆಯ ಹೋಟೆಲ್ವೊಂದರಲ್ಲಿ ಸಪ್ಲೈಯರ್ ಆಗಿದ್ದ.</p>.<p>ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಜಾವಳಿ ಗ್ರಾಮದ ಪುರದಮಕ್ಕಿಯ ಈತ ಬಾಲಕಿ ಮತ್ತು ಆಕೆಯ ಗೆಳತಿಗೆ ಫೋನ್ ಮಾಡಿ ಶಾಲೆ ಬಳಿಗೆ ಬನ್ನಿ ಮಾತನಾಡಬೇಕು ಎಂದು ಪುಸಲಾಯಿಸಿದ್ದ.</p>.<p>ಇಬ್ಬರೂ ಶಾಲೆ ಬಳಿ ಬಂದಾಗ ತಿನಿಸು, ಪಾನೀಯ ಕೊಟ್ಟು, ಅವರೊಂದಿಗೆ ತಾನೂ ಸೇವಿಸಿದ್ದ. ಶಾಲೆಯ ವರಾಂಡದಲ್ಲಿ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ. ವಿಷಯ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದ.</p>.<p>ಬಾಳೂರು ಪೊಲೀಸ್ ಠಾಣೆಯಲ್ಲಿ ಮೇ 16ರಂದು ಬಾಲಕಿಯ ತಾಯಿ ದೂರು ದಾಖಲಿಸಿದ್ದರು.</p>.<p>ಮೂಡಿಗೆರೆ ಇನ್ಸ್ಪೆಕ್ಟರ್ ಎಚ್.ಎಂ.ಜಗನ್ನಾಥ್ ಅವರು ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪೋಕ್ಸೊ ಕೋರ್ಟ್ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಬಿ.ಎಚ್. ಶ್ರೀಹರ್ಷ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: 14 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಸತೀಶ (20) ಎಂಬಾತಗೆ 20 ವರ್ಷ ಜೈಲು, ₹ 50 ಸಾವಿರ ದಂಡವನ್ನು ನಗರದ ಎಫ್ಟಿಎಸ್ಸಿ–1(ಪೊಕ್ಸೊ) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದೆ.</p>.<p>ನ್ಯಾಯಾಧೀಶರಾದ ವಿನುತಾ ಪಿ.ಶೆಟ್ಟಿ ಅವರು ಈ ಆದೇಶ ನೀಡಿದ್ದಾರೆ. ಬಾಲಕಿಗೆ ₹ 1.60 ಲಕ್ಷ ಪರಿಹಾರ ಧನ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಏನಿದು ಪ್ರಕರಣ: 2020ರ ಮೇ 15ರಂದು ಪ್ರಕರಣ ನಡೆದಿತ್ತು. ಸತೀಶ ಬೆಂಗಳೂರಿನ ಡಾಬಸ್ಪೇಟೆಯ ಹೋಟೆಲ್ವೊಂದರಲ್ಲಿ ಸಪ್ಲೈಯರ್ ಆಗಿದ್ದ.</p>.<p>ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಜಾವಳಿ ಗ್ರಾಮದ ಪುರದಮಕ್ಕಿಯ ಈತ ಬಾಲಕಿ ಮತ್ತು ಆಕೆಯ ಗೆಳತಿಗೆ ಫೋನ್ ಮಾಡಿ ಶಾಲೆ ಬಳಿಗೆ ಬನ್ನಿ ಮಾತನಾಡಬೇಕು ಎಂದು ಪುಸಲಾಯಿಸಿದ್ದ.</p>.<p>ಇಬ್ಬರೂ ಶಾಲೆ ಬಳಿ ಬಂದಾಗ ತಿನಿಸು, ಪಾನೀಯ ಕೊಟ್ಟು, ಅವರೊಂದಿಗೆ ತಾನೂ ಸೇವಿಸಿದ್ದ. ಶಾಲೆಯ ವರಾಂಡದಲ್ಲಿ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ. ವಿಷಯ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದ.</p>.<p>ಬಾಳೂರು ಪೊಲೀಸ್ ಠಾಣೆಯಲ್ಲಿ ಮೇ 16ರಂದು ಬಾಲಕಿಯ ತಾಯಿ ದೂರು ದಾಖಲಿಸಿದ್ದರು.</p>.<p>ಮೂಡಿಗೆರೆ ಇನ್ಸ್ಪೆಕ್ಟರ್ ಎಚ್.ಎಂ.ಜಗನ್ನಾಥ್ ಅವರು ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪೋಕ್ಸೊ ಕೋರ್ಟ್ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಬಿ.ಎಚ್. ಶ್ರೀಹರ್ಷ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>