<p><strong>ಚಿಕ್ಕಮಗಳೂರು:</strong> ಮೂರು ವರ್ಷಗಳ ಹಿಂದೆ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಲಕಿಯ ತಾಯಿ ಸೇರಿ ನಾಲ್ವರಿಗೆ ಜಿಲ್ಲಾ ತ್ವರಿತಗತಿ ನ್ಯಾಯಾಲಯ(ಪೋಕ್ಸೊ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಬಾಲಕಿ ತಾಯಿ ಮತ್ತು ಇಬ್ಬರಿಗೆ 20 ವರ್ಷ ಜೈಲುವಾಸದ ಶಿಕ್ಷೆ ಹಾಗೂ ಪ್ರಮುಖ ಆರೋಪಿಗೆ 22 ವರ್ಷ ಜೈಲು ಮತ್ತು ₹25 ಸಾವಿರ ದಂಡ ವಿಧಿಸಿದೆ.</p>.<p>ಶೃಂಗೇರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯನ್ನು ಅಕ್ರಮ ಚಟುವಟಿಕೆಗೆ ದೂಡಿದ್ದರ ಬಗ್ಗೆ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಅಂದಿನ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. 35 ಪ್ರಕರಣಗಳನ್ನು ದಾಖಲಿಸಲಾಗಿತ್ತು. ತಾಯಿ ಸೇರಿ 53 ಜನರನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು.</p>.<p>49 ಜನರನ್ನು ಖುಲಾಸೆಗೊಳಿಸಿ ನಾಲ್ವರನ್ನು ತಪ್ಪಿತಸ್ಥರು ಎಂದು ತೀರ್ಮಾನಿಸಿದ್ದ ನ್ಯಾಯಾಲಯ, ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಮೂರು ವರ್ಷಗಳ ಹಿಂದೆ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಲಕಿಯ ತಾಯಿ ಸೇರಿ ನಾಲ್ವರಿಗೆ ಜಿಲ್ಲಾ ತ್ವರಿತಗತಿ ನ್ಯಾಯಾಲಯ(ಪೋಕ್ಸೊ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಬಾಲಕಿ ತಾಯಿ ಮತ್ತು ಇಬ್ಬರಿಗೆ 20 ವರ್ಷ ಜೈಲುವಾಸದ ಶಿಕ್ಷೆ ಹಾಗೂ ಪ್ರಮುಖ ಆರೋಪಿಗೆ 22 ವರ್ಷ ಜೈಲು ಮತ್ತು ₹25 ಸಾವಿರ ದಂಡ ವಿಧಿಸಿದೆ.</p>.<p>ಶೃಂಗೇರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯನ್ನು ಅಕ್ರಮ ಚಟುವಟಿಕೆಗೆ ದೂಡಿದ್ದರ ಬಗ್ಗೆ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಅಂದಿನ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. 35 ಪ್ರಕರಣಗಳನ್ನು ದಾಖಲಿಸಲಾಗಿತ್ತು. ತಾಯಿ ಸೇರಿ 53 ಜನರನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು.</p>.<p>49 ಜನರನ್ನು ಖುಲಾಸೆಗೊಳಿಸಿ ನಾಲ್ವರನ್ನು ತಪ್ಪಿತಸ್ಥರು ಎಂದು ತೀರ್ಮಾನಿಸಿದ್ದ ನ್ಯಾಯಾಲಯ, ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>