<p>ತರೀಕೆರೆ: ಪಟ್ಟಣದ ಶ್ರೀಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ‘ರಾಯರಿದ್ದಾರೆ ಭಾಗ-2’ ಕಿರುಚಿತ್ರ ಪ್ರದರ್ಶನ ಸಮಾರಂಭಕ್ಕೆ, ಶ್ರೀರೇವಣಸಿದ್ದೇಶ್ವರ ಕುರುಬ ಸಮಾಜದ ಅಧ್ಯಕ್ಷ ಟಿ.ಎಸ್. ರಮೇಶ್ ಚಾಲನೆ ನೀಡಿದರು. </p>.<p>ಬಳಿಕ ಮಾತನಾಡಿದ ಅವರು, ‘ರಾಯರಿದ್ದಾರೆ ಭಾಗ-2 ಕಿರುಚಿತ್ರ ಚೆನ್ನಾಗಿ ಮೂಡಿಬಂದಿದೆ. ಎಸ್ಕೆಎಸ್ ಸಿದ್ಧಗಂಗಾ ಸಿನಿಮಾಸ್ ಅವರ ವಿಜಯ್ ತರೀಕೆರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಸ್ಥಳೀಯ ಕಲಾವಿದರು ಅದ್ಭುತವಾಗಿ ಅಭಿನಯಿಸಿದ್ದಾರೆ’ ಎಂದರು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿ, ಯುವ ಕಲಾವಿದರು ಸೇರಿಕೊಂಡು ರಾಯರಿದ್ದಾರೆ ಎಂಬ ಭಕ್ತಿಪೂರ್ವಕ ಕಿರುಚಿತ್ರ ನಿರ್ಮಿಸಿರುವುದು ಹೆಮ್ಮೆಯ ವಿಚಾರ ಎಂದರು.</p>.<p>ಪ್ಲಾರೆನ್ಸ್ ನೈಟಿಂಗೆಲ್ ಪ್ರಶಸ್ತಿ ಪುರಸ್ಕೃತ ರೇವಣ್ಣ, ಪುರಸಭೆ ಮಾಜಿ ಸದಸ್ಯ ಟಿ.ಜಿ. ಸದಾನಂದ್, ಕಸಾಪ ತಾಲ್ಲೂಕು ಮಾಜಿ ಅಧ್ಯಕ್ಷ ನವೀನ್ ಪೆನ್ನಯ್ಯ, ಚುಟುಕು ಸಾಹಿತಿ ಮಧುಸೂದನ್ ಕಕ್ರಿ ಮಾತನಾಡಿದರು.</p>.<p>ಕಿರು ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರಾದ ಮಂಜುಳ ವಿಜಯಕುಮಾರ್, ಚಂದ್ರಶೇಖರ್, ವಿಜಯ್ ಅವರನ್ನು ಗೌರವಿಸಲಾಯಿತು. ಕಲಾವಿದರಾದ ಗೌತಮ್, ದಿನೇಶ್, ಮನ್ವಿತ್ ದೇವು, ವಿವೇಕ್, ಲೇಖಕ ತ.ಮ. ದೇವಾನಂದ, ಶಾಂತ ಅಭಿಮಾನಿ ಬಳಗದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ಪಟ್ಟಣದ ಶ್ರೀಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ‘ರಾಯರಿದ್ದಾರೆ ಭಾಗ-2’ ಕಿರುಚಿತ್ರ ಪ್ರದರ್ಶನ ಸಮಾರಂಭಕ್ಕೆ, ಶ್ರೀರೇವಣಸಿದ್ದೇಶ್ವರ ಕುರುಬ ಸಮಾಜದ ಅಧ್ಯಕ್ಷ ಟಿ.ಎಸ್. ರಮೇಶ್ ಚಾಲನೆ ನೀಡಿದರು. </p>.<p>ಬಳಿಕ ಮಾತನಾಡಿದ ಅವರು, ‘ರಾಯರಿದ್ದಾರೆ ಭಾಗ-2 ಕಿರುಚಿತ್ರ ಚೆನ್ನಾಗಿ ಮೂಡಿಬಂದಿದೆ. ಎಸ್ಕೆಎಸ್ ಸಿದ್ಧಗಂಗಾ ಸಿನಿಮಾಸ್ ಅವರ ವಿಜಯ್ ತರೀಕೆರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಸ್ಥಳೀಯ ಕಲಾವಿದರು ಅದ್ಭುತವಾಗಿ ಅಭಿನಯಿಸಿದ್ದಾರೆ’ ಎಂದರು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿ, ಯುವ ಕಲಾವಿದರು ಸೇರಿಕೊಂಡು ರಾಯರಿದ್ದಾರೆ ಎಂಬ ಭಕ್ತಿಪೂರ್ವಕ ಕಿರುಚಿತ್ರ ನಿರ್ಮಿಸಿರುವುದು ಹೆಮ್ಮೆಯ ವಿಚಾರ ಎಂದರು.</p>.<p>ಪ್ಲಾರೆನ್ಸ್ ನೈಟಿಂಗೆಲ್ ಪ್ರಶಸ್ತಿ ಪುರಸ್ಕೃತ ರೇವಣ್ಣ, ಪುರಸಭೆ ಮಾಜಿ ಸದಸ್ಯ ಟಿ.ಜಿ. ಸದಾನಂದ್, ಕಸಾಪ ತಾಲ್ಲೂಕು ಮಾಜಿ ಅಧ್ಯಕ್ಷ ನವೀನ್ ಪೆನ್ನಯ್ಯ, ಚುಟುಕು ಸಾಹಿತಿ ಮಧುಸೂದನ್ ಕಕ್ರಿ ಮಾತನಾಡಿದರು.</p>.<p>ಕಿರು ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರಾದ ಮಂಜುಳ ವಿಜಯಕುಮಾರ್, ಚಂದ್ರಶೇಖರ್, ವಿಜಯ್ ಅವರನ್ನು ಗೌರವಿಸಲಾಯಿತು. ಕಲಾವಿದರಾದ ಗೌತಮ್, ದಿನೇಶ್, ಮನ್ವಿತ್ ದೇವು, ವಿವೇಕ್, ಲೇಖಕ ತ.ಮ. ದೇವಾನಂದ, ಶಾಂತ ಅಭಿಮಾನಿ ಬಳಗದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>