<p><strong>ಚಿಕ್ಕಮಗಳೂರು:</strong> ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ವಿಜ್ಞಾನ ಕಾಲೇಜಿಗೆ ಬೋಧಕ ಸಿಬ್ಬಂದಿ ನೇಮಕಾತಿಗೆ ನಿಗದಿಪಡಿಸಿದ್ದ ಸಂದರ್ಶನ ವೇಳಾಪಟ್ಟಿಯನ್ನು ಮೂರನೆಯ ಬಾರಿಗೆ ಮುಂದೂಡಲಾಗಿದೆ.</p>.<p>ಸಂದರ್ಶನಕ್ಕೆ ಅ.7ರಿಂದ 12ರವರೆಗೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಬೆಂಗಳೂರಿನ ಶಿವಾಜಿನಗರದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಜ್ಞಾನ ವಿದ್ಯಾಲಯದಲ್ಲಿ ಸ್ಥಳ ನಿಗದಿಪಡಿಸಲಾಗಿತ್ತು. ಆದರೆ, ಈ ಪ್ರಕ್ರಿಯೆಯನ್ನು ದಿಢೀರನೆ ಮುಂದೂಡಲಾಗಿದೆ. ಮುಂದಿನ ವೇಳಾಪಟ್ಟಿಯನ್ನು ಶೀಘ್ರದಲ್ಲೇ ವೆಬ್ಸೈಟ್ನಲ್ಲಿ ಪ್ರಕಟಿಸಲಾಗವುದು ಎಂದು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.</p>.<p>ಮೊದಲು ಜೂನ್ನಲ್ಲಿ ಸಂದರ್ಶನ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಕೋವಿಡ್ –19 ಕಾರಣದಿಂದ ಮುಂದೂಡಲಾಗಿತ್ತು. ಮತ್ತೆ ಸೆಪ್ಟೆಂಬರ್ನಲ್ಲಿ ಎರಡನೆಯ ಬಾರಿ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಕಾರಣಾಂತರಗಳಿಂದ ಅದನ್ನೂ ಮುಂದೂಡಲಾಗಿತ್ತು. ಇದೀಗ ಮೂರನೆಯ ಬಾರಿಯೂ ಸಂದರ್ಶನ ವೇಳಾಪಟ್ಟಿ ಮುಂದೂಡಲಾಗಿದೆ.</p>.<p>ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ವಿದ್ಯಾಲಯಕ್ಕೆ 81 ವಿವಿಧ ಹುದ್ದೆಗಳ (ಬೋಧಕ, ಇತರೆ) ನೇರ ನೇಮಕಾತಿಗೆ ಮೇನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು 5 ತಿಂಗಳಿಂದ ಸಂದರ್ಶನದ ನಿರೀಕ್ಷೆಯಲ್ಲಿ ಇದ್ದಾರೆ.</p>.<p>‘ಸಂದರ್ಶನಕ್ಕೆ ತಯಾರಿ ನಡೆಸಿದ್ದೆ. ಈಗ ಇದ್ದಕ್ಕಿದ್ದಂತೆ ಮುಂದೂಡಿದ್ದಾರೆ. ವೇಳಾಪಟ್ಟಿ ನಿಗದಿಪಡಿಸಿ ಪದೇ ಪದೇ ಮುಂದೂಡುತ್ತಿದ್ದಾರೆ. ಅರ್ಜಿ ಸಲ್ಲಿಸಿ ಐದು ತಿಂಗಳಾಗಿದೆ. ಸಂಬಂಧಪಟ್ಟವರು ತ್ವರಿತವಾಗಿ ಪ್ರಕ್ರಿಯೆ ನಡೆಸಲು ಕ್ರಮ ವಹಿಸಬೇಕು’ ಎಂದು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯೊಬ್ಬರು ಮನವಿ ಮಾಡಿದರು.</p>.<p>ನಗರದ ಮಧುವನ ಬಡಾವಣೆಯ ಕೆಎಸ್ಒಯು ಪ್ರಾದೇಶಿಕ ಕಚೇರಿ ಕಟ್ಟಡದಲ್ಲಿ ತಾತ್ಕಾಲಿಕವಾಗಿ ವೈದ್ಯಕೀಯ ಕಾಲೇಜಿನ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆದಿದೆ. ಪ್ರಯೋಗಾಲಯ, ವಿದ್ಯಾರ್ಥಿಗಳಿಗೆ ವಸತಿ ನಿಲಯ ತೆರೆಯುವ ನಿಟ್ಟಿನಲ್ಲಿ ತಯಾರಿ ನಡೆದಿದೆ.</p>.<p>ಜಿಲ್ಲೆಗೆ ಕೇಂದ್ರ ಪುರಸ್ಕೃತ ಯೋಜನೆಯಡಿ ವೈದ್ಯಕೀಯ ವಿಜ್ಞಾನ ಕಾಲೇಜು ಮಂಜೂರಾಗಿದೆ. 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರದಿಂದ ₹ 195 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ₹ 130 ಕೋಟಿ ಸೇರಿ ಒಟ್ಟು ₹ 325 ಕೋಟಿ ಅನುದಾನ ಮಂಜೂರಾಗಿದೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ತೇಗೂರು ಬಳಿಯ ಸರ್ವೆ ನಂಬರ್ 138, 192, 193ರಲ್ಲಿ 30.5 ಎಕರೆ ಜಾಗವನ್ನು ವೈದ್ಯಕೀಯ ವಿಜ್ಞಾನ ಕಾಲೇಜಿಗೆ ನಿಗದಿಪಡಿಸಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದೆ.</p>.<p><strong>‘ಚಿಕ್ಕಮಗಳೂರಿನಲ್ಲೇ ಸಂದರ್ಶನ’</strong></p>.<p>‘ಸಂದರ್ಶನವನ್ನು ಚಿಕ್ಕಮಗಳೂರಿನಲ್ಲೇ ನಡೆಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ ಮೇರೆಗೆ ಪ್ರಕ್ರಿಯೆ ಮುಂದೂಡಲಾಗಿದೆ. ಮುಂದಿನ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು’ ಎಂದು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಕಾಲೇಜಿನ ನಿರ್ದೇಶಕಿ ಡಾ.ಎಸ್.ಮೀರಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸಂದರ್ಶನ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ವಸತಿ ನಿಲಯ, ಮೈದಾನ ಎಲ್ಲವನ್ನೂ ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಂಡಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ವಿಜ್ಞಾನ ಕಾಲೇಜಿಗೆ ಬೋಧಕ ಸಿಬ್ಬಂದಿ ನೇಮಕಾತಿಗೆ ನಿಗದಿಪಡಿಸಿದ್ದ ಸಂದರ್ಶನ ವೇಳಾಪಟ್ಟಿಯನ್ನು ಮೂರನೆಯ ಬಾರಿಗೆ ಮುಂದೂಡಲಾಗಿದೆ.</p>.<p>ಸಂದರ್ಶನಕ್ಕೆ ಅ.7ರಿಂದ 12ರವರೆಗೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಬೆಂಗಳೂರಿನ ಶಿವಾಜಿನಗರದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಜ್ಞಾನ ವಿದ್ಯಾಲಯದಲ್ಲಿ ಸ್ಥಳ ನಿಗದಿಪಡಿಸಲಾಗಿತ್ತು. ಆದರೆ, ಈ ಪ್ರಕ್ರಿಯೆಯನ್ನು ದಿಢೀರನೆ ಮುಂದೂಡಲಾಗಿದೆ. ಮುಂದಿನ ವೇಳಾಪಟ್ಟಿಯನ್ನು ಶೀಘ್ರದಲ್ಲೇ ವೆಬ್ಸೈಟ್ನಲ್ಲಿ ಪ್ರಕಟಿಸಲಾಗವುದು ಎಂದು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.</p>.<p>ಮೊದಲು ಜೂನ್ನಲ್ಲಿ ಸಂದರ್ಶನ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಕೋವಿಡ್ –19 ಕಾರಣದಿಂದ ಮುಂದೂಡಲಾಗಿತ್ತು. ಮತ್ತೆ ಸೆಪ್ಟೆಂಬರ್ನಲ್ಲಿ ಎರಡನೆಯ ಬಾರಿ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಕಾರಣಾಂತರಗಳಿಂದ ಅದನ್ನೂ ಮುಂದೂಡಲಾಗಿತ್ತು. ಇದೀಗ ಮೂರನೆಯ ಬಾರಿಯೂ ಸಂದರ್ಶನ ವೇಳಾಪಟ್ಟಿ ಮುಂದೂಡಲಾಗಿದೆ.</p>.<p>ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ವಿದ್ಯಾಲಯಕ್ಕೆ 81 ವಿವಿಧ ಹುದ್ದೆಗಳ (ಬೋಧಕ, ಇತರೆ) ನೇರ ನೇಮಕಾತಿಗೆ ಮೇನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು 5 ತಿಂಗಳಿಂದ ಸಂದರ್ಶನದ ನಿರೀಕ್ಷೆಯಲ್ಲಿ ಇದ್ದಾರೆ.</p>.<p>‘ಸಂದರ್ಶನಕ್ಕೆ ತಯಾರಿ ನಡೆಸಿದ್ದೆ. ಈಗ ಇದ್ದಕ್ಕಿದ್ದಂತೆ ಮುಂದೂಡಿದ್ದಾರೆ. ವೇಳಾಪಟ್ಟಿ ನಿಗದಿಪಡಿಸಿ ಪದೇ ಪದೇ ಮುಂದೂಡುತ್ತಿದ್ದಾರೆ. ಅರ್ಜಿ ಸಲ್ಲಿಸಿ ಐದು ತಿಂಗಳಾಗಿದೆ. ಸಂಬಂಧಪಟ್ಟವರು ತ್ವರಿತವಾಗಿ ಪ್ರಕ್ರಿಯೆ ನಡೆಸಲು ಕ್ರಮ ವಹಿಸಬೇಕು’ ಎಂದು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯೊಬ್ಬರು ಮನವಿ ಮಾಡಿದರು.</p>.<p>ನಗರದ ಮಧುವನ ಬಡಾವಣೆಯ ಕೆಎಸ್ಒಯು ಪ್ರಾದೇಶಿಕ ಕಚೇರಿ ಕಟ್ಟಡದಲ್ಲಿ ತಾತ್ಕಾಲಿಕವಾಗಿ ವೈದ್ಯಕೀಯ ಕಾಲೇಜಿನ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆದಿದೆ. ಪ್ರಯೋಗಾಲಯ, ವಿದ್ಯಾರ್ಥಿಗಳಿಗೆ ವಸತಿ ನಿಲಯ ತೆರೆಯುವ ನಿಟ್ಟಿನಲ್ಲಿ ತಯಾರಿ ನಡೆದಿದೆ.</p>.<p>ಜಿಲ್ಲೆಗೆ ಕೇಂದ್ರ ಪುರಸ್ಕೃತ ಯೋಜನೆಯಡಿ ವೈದ್ಯಕೀಯ ವಿಜ್ಞಾನ ಕಾಲೇಜು ಮಂಜೂರಾಗಿದೆ. 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರದಿಂದ ₹ 195 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ₹ 130 ಕೋಟಿ ಸೇರಿ ಒಟ್ಟು ₹ 325 ಕೋಟಿ ಅನುದಾನ ಮಂಜೂರಾಗಿದೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ತೇಗೂರು ಬಳಿಯ ಸರ್ವೆ ನಂಬರ್ 138, 192, 193ರಲ್ಲಿ 30.5 ಎಕರೆ ಜಾಗವನ್ನು ವೈದ್ಯಕೀಯ ವಿಜ್ಞಾನ ಕಾಲೇಜಿಗೆ ನಿಗದಿಪಡಿಸಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದೆ.</p>.<p><strong>‘ಚಿಕ್ಕಮಗಳೂರಿನಲ್ಲೇ ಸಂದರ್ಶನ’</strong></p>.<p>‘ಸಂದರ್ಶನವನ್ನು ಚಿಕ್ಕಮಗಳೂರಿನಲ್ಲೇ ನಡೆಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ ಮೇರೆಗೆ ಪ್ರಕ್ರಿಯೆ ಮುಂದೂಡಲಾಗಿದೆ. ಮುಂದಿನ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು’ ಎಂದು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಕಾಲೇಜಿನ ನಿರ್ದೇಶಕಿ ಡಾ.ಎಸ್.ಮೀರಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸಂದರ್ಶನ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ವಸತಿ ನಿಲಯ, ಮೈದಾನ ಎಲ್ಲವನ್ನೂ ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಂಡಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>