ಚಿಕ್ಕಮಗಳೂರು: ‘ಭ್ರಷ್ಟಾಚಾರ, ಅಪ್ರಾಮಾಣಿಕತೆ, ಸ್ವಜನ ಪಕ್ಷಪಾತ, ಅನೈತಿಕ ನಡವಳಿಕೆ, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ತಿರಸ್ಕರಿಸಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್ಎಸ್) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಮನವಿ ಮಾಡಿದರು.