ಚಿಕ್ಕಮಗಳೂರು: ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ರಾಧಿಕಾಕುಮಾರಸ್ವಾಮಿ ಫೋಟೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿ ಕಾಮೆಂಟ್ ಮಾಡಿದ್ದಾರೆಂಬ ದೂರಿಗೆ ಸಂಬಂಧಿಸಿದಂತೆ ಬಂಧಿಸಿರುವ ಅಜಿತ್ಶೆಟ್ಟಿ ಹಾಗೂ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ನಕಲಿ ಪತ್ರ ಸೃಷ್ಟಿ ದೂರಿನ ಹಿನ್ನೆಲೆಯಲ್ಲಿ ಬಂಧಿಸಿರುವ ಪತ್ರಕರ್ತ ಹೇಮಂತ್ ಕುಮಾರ್, ಶ್ರುತಿ ಬೆಳ್ಳಕ್ಕಿ, ಶಾರದಾ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಶಾಸಕ ಸಿ.ಟಿ.ರವಿ ಇಲ್ಲಿ ಶುಕ್ರವಾರ ಆಗ್ರಹಿಸಿದರು.