ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಕಿಮ್ಸ್) ಎಂಬಿಬಿಎಸ್ ಅಧ್ಯಯನ, ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಮ್.ಡಿ ಕೋರ್ಸ್ ಪೂರ್ಣಗೊಳಿಸಿ, ಬಾಗಲಕೋಟೆಯ ಹೃದಯಭಾಗದಲ್ಲಿ ಮದರಕರ್ ಆಸ್ಪತ್ರೆ ತೆರೆದು ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿ ಅನೇಕರ ಪಾಲಿಗೆ ಆಶಾ ಜ್ಯೋತಿಯಾಗಿದ್ದಾರೆ. ಮದರಕರ್ ಚಾರಿಟಬಲ್ ಫೌಂಡೇಶನ್ನ ನಿರ್ದೇಶಕರಾಗಿ, ಬೀಳಗಿಯ ಎಸ್.ಆರ್. ಪಾಟೀಲ ಮೆಡಿಕಲ್ ಕಾಲೇಜಿನ ಚರ್ಮರೋಗಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಬಾಗಲಕೋಟೆಯ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ 25ಕ್ಕೂ ಹೆಚ್ಚು ಸಂಶೋಧನಾತ್ಮಕ ಲೇಖನಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿಗಳಲ್ಲಿ ಮಂಡಿಸಿದ್ದಾರೆ.