ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದಲ್ಲ. ಹೊಗಳಿಕೊಂಡು ಬಕೆಟ್ ಹಿಡಿಯುವ ರಾಜಕಾರಣಿಯೂ ಅಲ್ಲ. ರಾಜ್ಯೋತ್ಸವದವರೆಗೂ ಸಚಿವರಾಗಿ ಮುಂದುವರಿಯವಂತೆ ಕೆಲವು ಹಿರಿಯರು ಸಲಹೆ ನೀಡಿದ್ದರು. ಸಚಿವ ಸ್ಥಾನ ಅಧಿಕಾರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಜವಾಬ್ದಾರಿ, ಈ ಪೈಕಿ ಜವಾಬ್ದಾರಿ ಕೆಲಸ ಮಾಡುವುದಕ್ಕೆ ಉತ್ಸುಕನಾಗಿದ್ದೇನೆ’ ಎಂದು ಉತ್ತರಿಸಿದರು.