<p><strong>ಚಿಕ್ಕಮಗಳೂರು: </strong>ರಾಜೀನಾಮೆ ಅಂಗೀಕರಿಸುವಂತೆ ಇದೇ 2ರಂದು ಮುಖ್ಯಮಂತ್ರಿಯವರಿಗೆ ಮತ್ತೊಮ್ಮೆ ಮನವಿ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದಲ್ಲ. ಹೊಗಳಿಕೊಂಡು ಬಕೆಟ್ ಹಿಡಿಯುವ ರಾಜಕಾರಣಿಯೂ ಅಲ್ಲ. ರಾಜ್ಯೋತ್ಸವದವರೆಗೂ ಸಚಿವರಾಗಿ ಮುಂದುವರಿಯವಂತೆ ಕೆಲವು ಹಿರಿಯರು ಸಲಹೆ ನೀಡಿದ್ದರು. ಸಚಿವ ಸ್ಥಾನ ಅಧಿಕಾರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಜವಾಬ್ದಾರಿ, ಈ ಪೈಕಿ ಜವಾಬ್ದಾರಿ ಕೆಲಸ ಮಾಡುವುದಕ್ಕೆ ಉತ್ಸುಕನಾಗಿದ್ದೇನೆ’ ಎಂದು ಉತ್ತರಿಸಿದರು.</p>.<p>‘ಕಾಂಗ್ರೆಸ್ನವರು ಇವಿಎಂ ಮೇಲೆ ಆರೋಪ ಶುರು ಮಾಡಿದ್ದಾರೆ ಎಂದರೆ ಸೋಲು ಗ್ಯಾರಂಟಿ ಎಂಬುದು ಅವರಿಗೆ ತೀರ್ಮಾನವಾಗಿದೆ ಎಂದರ್ಥ. ಗೆದ್ದರೆ ಜನಾದೇಶ ಎನ್ನುತ್ತಾರೆ, ಸೋತರೆ ಇವಿಎಂ ದೋಷ ಎನ್ನುತ್ತಾರೆ’ ಮೂದಲಿಸಿದರು.</p>.<p>‘ಚುನಾವಣೆಯಲ್ಲಿ ಸೋಲಾದಾಗ ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸುವುದು. ಕೋರ್ಟ್ ತೀರ್ಪು ಬಂದಾಗ ನ್ಯಾಯಾಧೀಶರ ಮೇಲೆ ಅನುಮಾನ ಪಡುವುದು ಕಾಂಗ್ರೆಸ್ನ ಕಾಯಿಲೆ’ ಎಂದು ದೂಷಿಸಿದರು.</p>.<p>‘ಕರ್ನಾಟಕ ಬಿಜೆಪಿ ಭದ್ರಕೋಟೆ. ಅಲುಗಾಡಿಸಲು ಪ್ರಯತ್ನಿಸಿದವರೇ ಕುಸಿಯುತ್ತಾರೆ. ಪಕ್ಷದ ಆಂತರಿಕ ವರದಿ ಪ್ರಕಾರ ಶಿರಾ, ಆರ್.ಆರ್. ನಗರ ಎರಡೂ ಕ್ಷೇತ್ರಗಳಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ಗೆಲ್ಲಿಸಲು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಹೋದರರು ಎಲ್ಲ ತಂತ್ರಗಾರಿಕೆ ಮಾಡಿದ್ದಾರೆ. ಅವು ಫಲಿಸಿದಂತಿಲ್ಲ, ಅವರು ಹತಾಶರಾಗಿದ್ದಾರೆ’ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ರಾಜೀನಾಮೆ ಅಂಗೀಕರಿಸುವಂತೆ ಇದೇ 2ರಂದು ಮುಖ್ಯಮಂತ್ರಿಯವರಿಗೆ ಮತ್ತೊಮ್ಮೆ ಮನವಿ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದಲ್ಲ. ಹೊಗಳಿಕೊಂಡು ಬಕೆಟ್ ಹಿಡಿಯುವ ರಾಜಕಾರಣಿಯೂ ಅಲ್ಲ. ರಾಜ್ಯೋತ್ಸವದವರೆಗೂ ಸಚಿವರಾಗಿ ಮುಂದುವರಿಯವಂತೆ ಕೆಲವು ಹಿರಿಯರು ಸಲಹೆ ನೀಡಿದ್ದರು. ಸಚಿವ ಸ್ಥಾನ ಅಧಿಕಾರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಜವಾಬ್ದಾರಿ, ಈ ಪೈಕಿ ಜವಾಬ್ದಾರಿ ಕೆಲಸ ಮಾಡುವುದಕ್ಕೆ ಉತ್ಸುಕನಾಗಿದ್ದೇನೆ’ ಎಂದು ಉತ್ತರಿಸಿದರು.</p>.<p>‘ಕಾಂಗ್ರೆಸ್ನವರು ಇವಿಎಂ ಮೇಲೆ ಆರೋಪ ಶುರು ಮಾಡಿದ್ದಾರೆ ಎಂದರೆ ಸೋಲು ಗ್ಯಾರಂಟಿ ಎಂಬುದು ಅವರಿಗೆ ತೀರ್ಮಾನವಾಗಿದೆ ಎಂದರ್ಥ. ಗೆದ್ದರೆ ಜನಾದೇಶ ಎನ್ನುತ್ತಾರೆ, ಸೋತರೆ ಇವಿಎಂ ದೋಷ ಎನ್ನುತ್ತಾರೆ’ ಮೂದಲಿಸಿದರು.</p>.<p>‘ಚುನಾವಣೆಯಲ್ಲಿ ಸೋಲಾದಾಗ ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸುವುದು. ಕೋರ್ಟ್ ತೀರ್ಪು ಬಂದಾಗ ನ್ಯಾಯಾಧೀಶರ ಮೇಲೆ ಅನುಮಾನ ಪಡುವುದು ಕಾಂಗ್ರೆಸ್ನ ಕಾಯಿಲೆ’ ಎಂದು ದೂಷಿಸಿದರು.</p>.<p>‘ಕರ್ನಾಟಕ ಬಿಜೆಪಿ ಭದ್ರಕೋಟೆ. ಅಲುಗಾಡಿಸಲು ಪ್ರಯತ್ನಿಸಿದವರೇ ಕುಸಿಯುತ್ತಾರೆ. ಪಕ್ಷದ ಆಂತರಿಕ ವರದಿ ಪ್ರಕಾರ ಶಿರಾ, ಆರ್.ಆರ್. ನಗರ ಎರಡೂ ಕ್ಷೇತ್ರಗಳಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ಗೆಲ್ಲಿಸಲು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಹೋದರರು ಎಲ್ಲ ತಂತ್ರಗಾರಿಕೆ ಮಾಡಿದ್ದಾರೆ. ಅವು ಫಲಿಸಿದಂತಿಲ್ಲ, ಅವರು ಹತಾಶರಾಗಿದ್ದಾರೆ’ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>