ಮನವಿಯಲ್ಲಿ ಏನಿದೆ: ‘ಬಹಳ ಹಿಂದಿನ ಕಾಲದಿಂದ ಹಿಂದೂ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಭಕ್ತಿಪೂರ್ವಕವಾಗಿ ಹರಕೆಯನ್ನು ಸಲ್ಲಿಸಿ, ಕಾಣಿಕೆಯನ್ನು ಅರ್ಪಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುವ ಜೊತೆಗೆ ಪರೋಕ್ಷವಾಗಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುತ್ತಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಹಲವಾರು ಮಳಿಗೆಗಳು ಬರುವುದು ಸಾಮಾನ್ಯ. ಆದರೆ, ಹಿಂದೂಗಳ ಧಾರ್ಮಿಕ ಪ್ರತೀಕವಾದ ಜಾತ್ರೆಗೆ ಅನ್ಯ ಧರ್ಮದ ವ್ಯಾಪಾರಸ್ಥರು ಹೊರ ಊರಿನಿಂದ ಬಂದು ಸಮಾಜ ವಿರೋಧಿ ಕೆಲಸದಲ್ಲಿ ಭಾಗಿಯಾದ ಘಟನೆಗಳು ಇತ್ತೀಚೆಗೆ ಕಂಡುಬಂದಿದೆ. ಈ ಅನ್ಯ ಮತೀಯರು ಈ ಹಿಂದೆ ಹೈಕೋರ್ಟ್ ನೀಡಿದ ತೀರ್ಪಿನ್ನು ವಿರೋಧಿಸಿ ರಾಜ್ಯದಾದ್ಯಂತ ಬಂದ್ ನಡೆಸಿ ದೇಶದ ಸಂವಿಧಾನ ಮತ್ತು ಕಾನೂನಿನ ವಿರೋಧಿಗಳು ನಾವು ಎಂಬಂತೆ ತೋರಿದ ಉದ್ಧಟತನದ ಅವರ ನಡೆಯು ಬಹುಸಂಖ್ಯಾತ ಹಿಂದೂಗಳಲ್ಲಿ ಆಕ್ರೋಶ ಮತ್ತು ಅಸಹನೆಗೆ ಕಾರಣವಾಗಿದೆ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.