<p><strong>ಶೃಂಗೇರಿ (ಚಿಕ್ಕಮಗಳೂರು):</strong> ಪಟ್ಟಣ ಸಮೀಪದ ಭಾರತಿನಗರ ಮತ್ತು ಬನಶಂಕರಿ ಬಡಾವಣೆ ನಿವಾಸಿಗಳು ಹಣ ಕ್ರೋಡೀಕರಿಸಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಡಾಂಬರೀಕರಣಗೊಳಿಸಿದ್ದಾರೆ. </p>.<p>ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಬಡಾವಣೆ ಇದಾಗಿದೆ. ಮುಖ್ಯ ರಸ್ತೆ ಸಹಿತ ಮನೆಗಳಿಗೆ ಸಂಪರ್ಕಿಸುವ ರಸ್ತೆ ಗುಂಡಿಯಿಂದ ಕೂಡಿದ್ದು, ಮಳೆಗಾಲದಲ್ಲಿ ಕೆಸರು ಹಾಗೂ ಬೇಸಿಗೆಯಲ್ಲಿ ದೂಳಿನಿಂದ ವಾಹನ ಸವಾರರು ಪರದಾಡುವಂತಾಗಿತ್ತು.</p>.<p>ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಈ ಬಡಾವಣೆಯಲ್ಲಿ 350ಕ್ಕೂ ಹೆಚ್ಚು ನಿವೇಶನಗಳಿದ್ದು, 200ಕ್ಕೂ ಹೆಚ್ಚು ಮನೆಗಳು ನಿರ್ಮಾಣವಾಗಿವೆ. ಮೂಲ ಸೌಕರ್ಯ ವಂಚಿತವಾಗಿರುವ ಬಡಾವಣೆಗೆ ಗ್ರಾಮ ಪಂಚಾಯಿತಿಯಿಂದ ಬೀದಿದೀಪ ಮಾತ್ರ ಕಲ್ಪಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಇನ್ನೂ ಲಭ್ಯವಾಗಿಲ್ಲ. ಗ್ರಾಮ ಪಂಚಾಯಿತಿ ಈ ವರ್ಷ ಚರಂಡಿ ನಿರ್ಮಾಣಕ್ಕಾಗಿ ₹2 ಲಕ್ಷ ಮೀಸಲಿಟ್ಟಿದ್ದು ಹೊರತು ಪಡಿಸಿದರೆ ಬೇರೆ ಅನುದಾನ ನೀಡಿಲ್ಲ ಎಂಬುದು ಬಡಾವಣೆ ನಿವಾಸಿಗಳ ಆರೋಪ.</p>.<p>ಮುಖ್ಯ ರಸ್ತೆಯನ್ನು ಸುಸಜ್ಜಿತವಾಗಿ ನಿರ್ಮಿಸಲು ಪಣತೊಟ್ಟ ನಿವಾಸಿಗಳು ₹15.75 ಲಕ್ಷ ದೇಣಿಗೆ ಸಂಗ್ರಹ ಮಾಡಿದ್ದು, 286 ಮೀಟರ್ ರಸ್ತೆ ನಿರ್ಮಾಣವಾಗಿದೆ. ಇನ್ನೂ 330 ಮೀಟರ್ ರಸ್ತೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ಇದಕ್ಕಾಗಿ ನಿವಾಸಿಗಳು ಸಂಘ ರಚಿಸಿಕೊಂಡಿದ್ದಾರೆ. </p>.<p>ರಸ್ತೆಯನ್ನು ಸೇವೆಗೆ ಮುಕ್ತಗೊಳಿಸಿದ ಸಂದರ್ಭದಲ್ಲಿ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಶೆಟ್ಟಿ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ (ಚಿಕ್ಕಮಗಳೂರು):</strong> ಪಟ್ಟಣ ಸಮೀಪದ ಭಾರತಿನಗರ ಮತ್ತು ಬನಶಂಕರಿ ಬಡಾವಣೆ ನಿವಾಸಿಗಳು ಹಣ ಕ್ರೋಡೀಕರಿಸಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಡಾಂಬರೀಕರಣಗೊಳಿಸಿದ್ದಾರೆ. </p>.<p>ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಬಡಾವಣೆ ಇದಾಗಿದೆ. ಮುಖ್ಯ ರಸ್ತೆ ಸಹಿತ ಮನೆಗಳಿಗೆ ಸಂಪರ್ಕಿಸುವ ರಸ್ತೆ ಗುಂಡಿಯಿಂದ ಕೂಡಿದ್ದು, ಮಳೆಗಾಲದಲ್ಲಿ ಕೆಸರು ಹಾಗೂ ಬೇಸಿಗೆಯಲ್ಲಿ ದೂಳಿನಿಂದ ವಾಹನ ಸವಾರರು ಪರದಾಡುವಂತಾಗಿತ್ತು.</p>.<p>ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಈ ಬಡಾವಣೆಯಲ್ಲಿ 350ಕ್ಕೂ ಹೆಚ್ಚು ನಿವೇಶನಗಳಿದ್ದು, 200ಕ್ಕೂ ಹೆಚ್ಚು ಮನೆಗಳು ನಿರ್ಮಾಣವಾಗಿವೆ. ಮೂಲ ಸೌಕರ್ಯ ವಂಚಿತವಾಗಿರುವ ಬಡಾವಣೆಗೆ ಗ್ರಾಮ ಪಂಚಾಯಿತಿಯಿಂದ ಬೀದಿದೀಪ ಮಾತ್ರ ಕಲ್ಪಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಇನ್ನೂ ಲಭ್ಯವಾಗಿಲ್ಲ. ಗ್ರಾಮ ಪಂಚಾಯಿತಿ ಈ ವರ್ಷ ಚರಂಡಿ ನಿರ್ಮಾಣಕ್ಕಾಗಿ ₹2 ಲಕ್ಷ ಮೀಸಲಿಟ್ಟಿದ್ದು ಹೊರತು ಪಡಿಸಿದರೆ ಬೇರೆ ಅನುದಾನ ನೀಡಿಲ್ಲ ಎಂಬುದು ಬಡಾವಣೆ ನಿವಾಸಿಗಳ ಆರೋಪ.</p>.<p>ಮುಖ್ಯ ರಸ್ತೆಯನ್ನು ಸುಸಜ್ಜಿತವಾಗಿ ನಿರ್ಮಿಸಲು ಪಣತೊಟ್ಟ ನಿವಾಸಿಗಳು ₹15.75 ಲಕ್ಷ ದೇಣಿಗೆ ಸಂಗ್ರಹ ಮಾಡಿದ್ದು, 286 ಮೀಟರ್ ರಸ್ತೆ ನಿರ್ಮಾಣವಾಗಿದೆ. ಇನ್ನೂ 330 ಮೀಟರ್ ರಸ್ತೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ಇದಕ್ಕಾಗಿ ನಿವಾಸಿಗಳು ಸಂಘ ರಚಿಸಿಕೊಂಡಿದ್ದಾರೆ. </p>.<p>ರಸ್ತೆಯನ್ನು ಸೇವೆಗೆ ಮುಕ್ತಗೊಳಿಸಿದ ಸಂದರ್ಭದಲ್ಲಿ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಶೆಟ್ಟಿ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>