ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್‌ ಚುನಾವಣೆ ರದ್ದು: ವಿಭಾಗೀಯ ಪೀಠಕ್ಕೆ ವರ್ಗ

Last Updated 20 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಕೀಲರ ಪರಿಷತ್ ಚುನಾವಣೆ ರದ್ದುಪಡಿಸಿರುವ ಭಾರತೀಯ ವಕೀಲರ ಪರಿಷತ್‌ನ ಚುನಾವಣಾ ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿದ ರಿಟ್‌ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಗಿದೆ.

ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ಚುನಾವಣೆಗೆ ಸ್ಪರ್ಧಿಸಿದ್ದ ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಸಲ್ಲಿಸಿರುವ ಈ ಅರ್ಜಿ ಶುಕ್ರವಾರ ನ್ಯಾಯಮೂರ್ತಿ ಆರ್‌.ಎಸ್‌. ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

‘ನಿಯಮಗಳ ಪ್ರಕಾರ ಈ ಅರ್ಜಿ ವಿಚಾರಣೆಯನ್ನು ವಿಭಾಗೀಯ ನ್ಯಾಯಪೀಠವೇ ನಡೆಸಬೇಕಿದೆ’ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿಗಳು ಅರ್ಜಿಯನ್ನು ವಿಚಾರಣೆಗಾಗಿ ವಿಭಾಗೀಯ ಪೀಠದ ಮುಂದೆ ಪಟ್ಟಿ ಮಾಡುವಂತೆ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT