ಚಿಕ್ಕಮಗಳೂರು: ತಾಲ್ಲೂಕಿನ ಉದ್ದೇಬೋರನಹಳ್ಳಿಯ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ಡಿಕ್ಕಿ ಹೊಡೆದು ಜಯಣ್ಣ (58) ಹಾಗೂ ಪುತ್ರಿ ರಕ್ಷಿತಾ (19) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮುಗಳವಳ್ಳಿಯ ಜಯಣ್ಣ ಅವರು ದ್ವಿಚಕ್ರ ವಾಹನದಲ್ಲಿ ಪಿಳ್ಳೆನಹಳ್ಳಿಗೆ ತೆರಳಿ ಸಹೋದರಿಗೆ ಬಾಗಿನ ನೀಡಿ ವಾಪಸಾಗುವಾಗ ಅವಘಡ ಸಂಭವಿಸಿದೆ. ಎಲ್ಪಿಜಿ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿವೆ.
ಲಾರಿ ಪಲ್ಟಿಯಾಗಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.