'ಆಗಿನ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಮನವೊಲಿಸಿ ನಾವು ಈ ರಸ್ತೆಗೆ ದುಡ್ಡು ಬಿಡುಗಡೆ ಮಾಡಿಸಿದ್ದೆವು. ಮೂರು ವರ್ಷ ರಸ್ತೆ ಕಾಮಗಾರಿ ನಡೆಯಿತು. ಆದರೆ, ಸರಿಯಾಗಿ ಕಾಮಗಾರಿ ಮಾಡಲಿಲ್ಲ. ಈ ವರ್ಷದ ಬೇಸಿಗೆಯಲ್ಲಿ ಮಾಡಿದ ಕಾಮಗಾರಿಯಲ್ಲಿ ರಸ್ತೆಯ ಅಗಲನ್ನು ಕೂಡ ಕಡಿಮೆ ಮಾಡಿದ್ದಾರೆ. ಚರಂಡಿ ನಿರ್ಮಿಸದೆ ರಸ್ತೆ ಹಾಳಾಗಲು ಅಧಿಕಾರಿಗಳು ಕಾರಣವಾಗಿದ್ದಾರೆ. ಇವರ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಜೆಡಿಎಸ್ ಮುಖಂಡ ಪ್ರಸಾದ್ ಜೈನ್ ಬಲಿಗೆ ಹೇಳಿದರು.