<p><strong>ಕಳಸ: </strong>ರಸ್ತೆಯಲ್ಲಿನ ಗುಂಡಿಗಳಿಂದಾಗಿ ಕಳಸ-ಹೊರನಾಡು ರಸ್ತೆಯಲ್ಲಿ ಖಾಸಗಿ ಬಸ್ ಟೈರ್ ಸಿಡಿದು ಸುದ್ದಿಯಾಗಿ ವಾರ ಪೂರ್ಣಗೊಳ್ಳುವ ಮೊದಲೇ ಕಳಸ-ಬಾಳೆಹೊಳೆ ರಸ್ತೆಯಲ್ಲಿ ಸೋಮವಾರ ಖಾಸಗಿ ಬಸ್ಸಿನ ಹೌಸಿಂಗ್ ತುಂಡಾಗಿ ನೆಲಕ್ಕೆ ಬಿದ್ದಿದೆ.</p>.<p>ಮಾಗುಂಡಿ- ಕಳಸ- ಎಸ್.ಕೆ.ಬಾರ್ಡರ್ ರಸ್ತೆ ದುರಸ್ತಿ ಮಾಡಿಸುವಂತೆ 2 ವರ್ಷಗಳಿಂದ ಒತ್ತಾಯ ಕೇಳಿಬಂದಿದ್ದರೂ, ಲೋಕೋಪಯೋಗಿ ಇಲಾಖೆ ಸ್ಪಂದಿಸಿಲ್ಲ ಎಂಬ ಆರೋಪಗಳಿವೆ. ಇದನ್ನು ಹೆದ್ದಾರಿ ಎಂದು ಕರೆಯುವಂತೆಯೇ ಇಲ್ಲ. ನೂರಾರು ಗುಂಡಿಗಳು ಇರುವ ಹೆದ್ದಾರಿಯಲ್ಲಿ ರಸ್ತೆಯನ್ನು ಹುಡುಕಿ ವಾಹನ ಚಲಾಯಿಸಬೇಕಿದೆ ಎಂದು ವಾಹನ ಚಾಲಕರು ದೂರುತ್ತಾರೆ.</p>.<p>ಮಾಗುಂಡಿ- ಕಳಸ- ಕುದುರೆಮುಖ- ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ ದುರಸ್ತಿ ಆಗಬೇಕು ಎಂದು ಬೇಸಿಗೆಯಲ್ಲಿ ಸ್ಥಳೀಯರು ರಸ್ತೆ ತಡೆ ಮಾಡಿ ಪ್ರತಿಭಟಿಸಿದ್ದರು.</p>.<p>ಆದರೆ, ಯೋಜನೆ ಸಿದ್ಧಪಡಿಸಿದ ಲೋಕೋಪಯೋಗಿ ಇಲಾಖೆ ಬಳಿಕ ಕ್ರಮ ಕೈಗೊಂಡಿಲ್ಲ. ರಸ್ತೆ ಅಭಿವೃದ್ಧಿ ಪಡಿಸಿಲ್ಲ ಎಂದು ರಸ್ತೆ ಬಳಕೆದಾರರು ದೂರುತ್ತಾರೆ.</p>.<p>‘ಪಕ್ಕದ ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲ್ಲೂಕಿನಲ್ಲಿ ರಸ್ತೆಯಲ್ಲಿ ಗುಂಡಿ ಬಿದ್ದ ಕೂಡಲೇ ದುರಸ್ತಿ ಮಾಡುತ್ತಾರೆ. ಈ ರಸ್ತೆಯ ವಿಚಾರದಲ್ಲಿ ಇಲಾಖೆಯ ಸ್ಪಂದನೆ ಅತ್ಯಂತ ನಿರ್ಲಕ್ಷ್ಯದಿಂದ ಕೂಡಿದೆ’ ಎಂದು ಜಿಲ್ಲಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕೆ.ಕೆ.ಬಾಲಕೃಷ್ಣ ಭಟ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ: </strong>ರಸ್ತೆಯಲ್ಲಿನ ಗುಂಡಿಗಳಿಂದಾಗಿ ಕಳಸ-ಹೊರನಾಡು ರಸ್ತೆಯಲ್ಲಿ ಖಾಸಗಿ ಬಸ್ ಟೈರ್ ಸಿಡಿದು ಸುದ್ದಿಯಾಗಿ ವಾರ ಪೂರ್ಣಗೊಳ್ಳುವ ಮೊದಲೇ ಕಳಸ-ಬಾಳೆಹೊಳೆ ರಸ್ತೆಯಲ್ಲಿ ಸೋಮವಾರ ಖಾಸಗಿ ಬಸ್ಸಿನ ಹೌಸಿಂಗ್ ತುಂಡಾಗಿ ನೆಲಕ್ಕೆ ಬಿದ್ದಿದೆ.</p>.<p>ಮಾಗುಂಡಿ- ಕಳಸ- ಎಸ್.ಕೆ.ಬಾರ್ಡರ್ ರಸ್ತೆ ದುರಸ್ತಿ ಮಾಡಿಸುವಂತೆ 2 ವರ್ಷಗಳಿಂದ ಒತ್ತಾಯ ಕೇಳಿಬಂದಿದ್ದರೂ, ಲೋಕೋಪಯೋಗಿ ಇಲಾಖೆ ಸ್ಪಂದಿಸಿಲ್ಲ ಎಂಬ ಆರೋಪಗಳಿವೆ. ಇದನ್ನು ಹೆದ್ದಾರಿ ಎಂದು ಕರೆಯುವಂತೆಯೇ ಇಲ್ಲ. ನೂರಾರು ಗುಂಡಿಗಳು ಇರುವ ಹೆದ್ದಾರಿಯಲ್ಲಿ ರಸ್ತೆಯನ್ನು ಹುಡುಕಿ ವಾಹನ ಚಲಾಯಿಸಬೇಕಿದೆ ಎಂದು ವಾಹನ ಚಾಲಕರು ದೂರುತ್ತಾರೆ.</p>.<p>ಮಾಗುಂಡಿ- ಕಳಸ- ಕುದುರೆಮುಖ- ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ ದುರಸ್ತಿ ಆಗಬೇಕು ಎಂದು ಬೇಸಿಗೆಯಲ್ಲಿ ಸ್ಥಳೀಯರು ರಸ್ತೆ ತಡೆ ಮಾಡಿ ಪ್ರತಿಭಟಿಸಿದ್ದರು.</p>.<p>ಆದರೆ, ಯೋಜನೆ ಸಿದ್ಧಪಡಿಸಿದ ಲೋಕೋಪಯೋಗಿ ಇಲಾಖೆ ಬಳಿಕ ಕ್ರಮ ಕೈಗೊಂಡಿಲ್ಲ. ರಸ್ತೆ ಅಭಿವೃದ್ಧಿ ಪಡಿಸಿಲ್ಲ ಎಂದು ರಸ್ತೆ ಬಳಕೆದಾರರು ದೂರುತ್ತಾರೆ.</p>.<p>‘ಪಕ್ಕದ ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲ್ಲೂಕಿನಲ್ಲಿ ರಸ್ತೆಯಲ್ಲಿ ಗುಂಡಿ ಬಿದ್ದ ಕೂಡಲೇ ದುರಸ್ತಿ ಮಾಡುತ್ತಾರೆ. ಈ ರಸ್ತೆಯ ವಿಚಾರದಲ್ಲಿ ಇಲಾಖೆಯ ಸ್ಪಂದನೆ ಅತ್ಯಂತ ನಿರ್ಲಕ್ಷ್ಯದಿಂದ ಕೂಡಿದೆ’ ಎಂದು ಜಿಲ್ಲಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕೆ.ಕೆ.ಬಾಲಕೃಷ್ಣ ಭಟ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>