ಜೆಡಿಎಸ್ ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷ ರೆಹಮಾನ್ ಇಂದ್ರವಳ್ಳಿ ಮಾತನಾಡಿ, ‘ಹಾಂದಿಯಿಂದ ಬಸ್ಕಲ್ ಮೂಲಕ ಬೇಲೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಪ್ರತಿನಿತ್ಯ ಒಂದೂವರೆ ಸಾವಿರಕ್ಕೂ ಅಧಿಕ ವಾಹನಗಳು ಸಂಚರಿಸುತ್ತವೆ. ಆದರೆ, ರಸ್ತೆಯಲ್ಲಿ ಮಾರುದ್ದ ಗುಂಡಿ ಬಿದ್ದು ಎರಡು ವರ್ಷ ಕಳೆದರೂ ಇದುವರೆಗೂ ದುರಸ್ತಿ ಮಾಡಿಲ್ಲ. ಇದರಿಂದಾಗಿ ಸಂಪರ್ಕ ರಸ್ತೆಯ ಸುತ್ತಮುತ್ತಲಿನ ಗ್ರಾಮಗಳ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ ಗುಂಡಿ ಬಿದ್ದಿರುವುದರಿಂದ ಬಾಡಿಗೆ ವಾಹನಗಳು ಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಮಹಿಳೆಯರು, ಮಕ್ಕಳು, ವೃದ್ದರು, ರೋಗಿಗಳು ಪಟ್ಟಣಕ್ಕೆ ಬರಲು ಪರದಾಡುವಂತಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.