ಗ್ರಾಮದ ಸುನಿಲ್ ಮಾತನಾಡಿ, ‘45 ವರ್ಷಗಳಿಂದ ಇದೇ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದು, 20ಕ್ಕೂ ಹೆಚ್ಚು ಕುಟುಂಬಗಳು ಈ ರಸ್ತೆಯ ಮೂಲಕವೇ ಪಟ್ಟಣಕ್ಕೆ ಬರಬೇಕಾಗಿದೆ. ಈಗ ಬೇಸಿಗೆ ಸಮಯ ಗದ್ದೆಯ ಮೂಲಕ ನಡೆದಾಡುವ ಪ್ರಯತ್ನ ಮಾಡುತ್ತಿದ್ದೇವೆ, ಮಳೆಗಾಲದಲ್ಲಿ ತೀವ್ರ ತೊಂದರೆ ಉಂಟಾಗುತ್ತದೆ. ಇತ್ತೀಚೆಗೆ ಗ್ರಾಮದ ಇಬ್ಬರು ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಆಗದೆ, ಅವರು ಮೃತಪಟ್ಟಿದ್ದಾರೆ’ ಎಂದು ಮಾಹಿತಿ ಹಂಚಿಕೊಂಡರು.