<p><strong>ಕೊಪ್ಪ:</strong> ಪಟ್ಟಣ ಸಮೀಪದ ಅಮ್ಮಡಿ, ಮೇಲಿನ ಕೌರಿ, ಗುಣವಂತೆ ರಸ್ತೆ ಮೂಲಕ ಪಟ್ಟಣವನ್ನು ತಲುಪಬಹುದಾದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡ ಗುಂಡಿಗಳಿಂದಾಗಿ ಜನರು, ವಾಹನಗಳು ಓಡಾಡದ ದುಸ್ಥಿತಿ ನಿರ್ಮಾಣವಾಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ರಸ್ತೆಯನ್ನು ಅಭಿವೃದ್ಧಿಪಡಿಸಿದರೆ ಸಂಚಾರ ದಟ್ಟಣೆ ತಡೆದು ಪಟ್ಟಣ ಕಡೆಯಿಂದ ತೀರ್ಥಹಳ್ಳಿ ಕಡೆಗೆ, ಶೃಂಗೇರಿ ಕಡೆಗೆ ಹೋಗುವಂತೆ ಅವಕಾಶ ಕಲ್ಪಿಸುವುದು ಸಾಧ್ಯವಾಗುತ್ತದೆ. ಅಲ್ಲದೇ, ಸುಲಭ ಮಾರ್ಗವೂ ಹೌದು. ಇದೇ ರಸ್ತೆಯನ್ನು ಬೈಪಾಸ್ ರಸ್ತೆಯೆಂದು ಪರಿಗಣಿಸಿ, ಅಭಿವೃದ್ಧಿಪಡಿಸಬೇಕೆಂಬ ಜನರ ಬೇಡಿಕೆ ಹಲವು ವರ್ಷಗಳದ್ದಾಗಿದೆ.</p>.<p>ಈ ರಸ್ತೆಗೆ ಡಾಂಬರು ಹಾಕಿ ಕೆಲವೇ ವರ್ಷಗಳಲ್ಲಿ ಅದು ಕಿತ್ತು ಹೋಗಿದ್ದು, ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ರಸ್ತೆ ಮಾರ್ಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯೂ ಇದ್ದು, ಹೊಸದಾಗಿ ಐಟಿಐ ಕಾಲೇಜು ನಿರ್ಮಾಣವಾಗುತ್ತಿರುವುದರಿಂದ ರಸ್ತೆ ನಿರ್ಮಾಣ ಅಗತ್ಯವಾಗಿದೆ ಎಂದು ಒತ್ತಾಯಿಸಿದ್ದಾರೆ.</p>.<p>‘ಡಾಂಬರು ಕಂಡು ಕೆಲವೇ ವರ್ಷಗಳಲ್ಲಿ ರಸ್ತೆ ಕಿತ್ತು ಹೋಗಿದೆ. ಇದು ಗ್ರಾಮಾಂತರ ಪಂಚಾಯಿತಿ ವ್ಯಾಪ್ತಿಗೆ ಸೇರಿರುವುದರಿಂದ ಅವರು ಹೆಚ್ಚಿನ ಕಾಳಜಿ ತೋರಿಸಿ, ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ’ ಎಂದು ಗ್ರಾಮಸ್ಥ ಅಮ್ಮಡಿ ರಾಜೇಶ್ ಒತ್ತಾಯಿಸಿದ್ದಾರೆ.</p>.<p><strong>ಜನಪ್ರತಿನಿಧಿಗಳು ಕಾಳಜಿ ವಹಿಸುತ್ತಿಲ್ಲ: </strong>‘ರಸ್ತೆ ಕುರಿತು ಜನಪ್ರತಿನಿಧಿಗಳು ಕಾಳಜಿ ವಹಿಸುತ್ತಿಲ್ಲ. ರಸ್ತೆ ಮಾಡಿ 4 ವರ್ಷ ಕಳೆಯುವುದರೊಳಗೆ ಹೊಂಡ ಗುಂಡಿಗಳಿಂದಾಗಿ ನಡೆದಾಡಲು ಸಾಧ್ಯವಾಗುತ್ತಿಲ್ಲ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ಹೊಂಡ ಗುಂಡಿಗಳಲ್ಲಿ ನೀರು ನಿಲ್ಲುವಂತಾಗಿದೆ’ ಎಂದು ಗ್ರಾಮಸ್ಥ ಅಮ್ಮಡಿ ಅಶೋಕ್ ಹೇಳಿದ್ದಾರೆ.</p>.<p><strong>ಸಮಸ್ಯೆ ನಿವಾರಿಸುವಂತೆ ಒತ್ತಾಯ: </strong>ಗ್ರಾಮಾಂತರ ಗ್ರಾಮ ಪಂಚಾಯಿತಿ ಸದಸ್ಯ ಎಚ್.ಆರ್. ಸಂಜೀವ ಮಾತನಾಡಿ, ‘ಈ ಭಾಗದಲ್ಲಿ ಆಶ್ರಯ ನಿವೇಶನಕ್ಕೆ 6 ಎಕರೆ ಜಾಗ ಮಂಜೂರಾಗಿದೆ. ಈ ಹಿಂದೆ ಶಾಸಕ ರಾಜೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾಗ ರಸ್ತೆ ಸಮಸ್ಯೆ ಅರಿತು, ರಸ್ತೆ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ತಂದಿದ್ದರು. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಯೂ ಮುಗಿದಿತ್ತು. ಸಮಸ್ಯೆ ನಿವಾರಿಸುವಂತೆ ನಾವೂ ಒತ್ತಾಯಿಸಿದ್ದೇವೆ’ ಎಂದು ಹೇಳಿದ್ದಾರೆ.</p>.<p><strong>ಪ್ರತಿಭಟನೆಯ ಎಚ್ಚರಿಕೆ</strong><br />ಶಾಸಕ ಟಿ.ಡಿ. ರಾಜೇಗೌಡ ಅವರು ಪ್ರತಿಕ್ರಿಯಿಸಿ, ‘ಹಿಂದಿನ ಸರ್ಕಾರವಿದ್ದಾಗ ಮಂಜೂರಾದ ರಸ್ತೆ ಕಾಮಗಾರಿ ತಾತ್ಕಾಲಿಕ ತಡೆ ಹಿಡಿದ್ದಾರೆ. ಹಣ ನೀಡುವುದಾಗಿ ಹೇಳಿದ್ದಾರೆ, ಒಂದು ವೇಳೆ ಅನುದಾನ ಬಿಡುಗಡೆಗೊಳಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗೆ ಮನವಿ ನೀಡಿ, ಮುಖ್ಯಮಂತ್ರಿಗೆ ಕಳುಹಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ:</strong> ಪಟ್ಟಣ ಸಮೀಪದ ಅಮ್ಮಡಿ, ಮೇಲಿನ ಕೌರಿ, ಗುಣವಂತೆ ರಸ್ತೆ ಮೂಲಕ ಪಟ್ಟಣವನ್ನು ತಲುಪಬಹುದಾದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡ ಗುಂಡಿಗಳಿಂದಾಗಿ ಜನರು, ವಾಹನಗಳು ಓಡಾಡದ ದುಸ್ಥಿತಿ ನಿರ್ಮಾಣವಾಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ರಸ್ತೆಯನ್ನು ಅಭಿವೃದ್ಧಿಪಡಿಸಿದರೆ ಸಂಚಾರ ದಟ್ಟಣೆ ತಡೆದು ಪಟ್ಟಣ ಕಡೆಯಿಂದ ತೀರ್ಥಹಳ್ಳಿ ಕಡೆಗೆ, ಶೃಂಗೇರಿ ಕಡೆಗೆ ಹೋಗುವಂತೆ ಅವಕಾಶ ಕಲ್ಪಿಸುವುದು ಸಾಧ್ಯವಾಗುತ್ತದೆ. ಅಲ್ಲದೇ, ಸುಲಭ ಮಾರ್ಗವೂ ಹೌದು. ಇದೇ ರಸ್ತೆಯನ್ನು ಬೈಪಾಸ್ ರಸ್ತೆಯೆಂದು ಪರಿಗಣಿಸಿ, ಅಭಿವೃದ್ಧಿಪಡಿಸಬೇಕೆಂಬ ಜನರ ಬೇಡಿಕೆ ಹಲವು ವರ್ಷಗಳದ್ದಾಗಿದೆ.</p>.<p>ಈ ರಸ್ತೆಗೆ ಡಾಂಬರು ಹಾಕಿ ಕೆಲವೇ ವರ್ಷಗಳಲ್ಲಿ ಅದು ಕಿತ್ತು ಹೋಗಿದ್ದು, ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ರಸ್ತೆ ಮಾರ್ಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯೂ ಇದ್ದು, ಹೊಸದಾಗಿ ಐಟಿಐ ಕಾಲೇಜು ನಿರ್ಮಾಣವಾಗುತ್ತಿರುವುದರಿಂದ ರಸ್ತೆ ನಿರ್ಮಾಣ ಅಗತ್ಯವಾಗಿದೆ ಎಂದು ಒತ್ತಾಯಿಸಿದ್ದಾರೆ.</p>.<p>‘ಡಾಂಬರು ಕಂಡು ಕೆಲವೇ ವರ್ಷಗಳಲ್ಲಿ ರಸ್ತೆ ಕಿತ್ತು ಹೋಗಿದೆ. ಇದು ಗ್ರಾಮಾಂತರ ಪಂಚಾಯಿತಿ ವ್ಯಾಪ್ತಿಗೆ ಸೇರಿರುವುದರಿಂದ ಅವರು ಹೆಚ್ಚಿನ ಕಾಳಜಿ ತೋರಿಸಿ, ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ’ ಎಂದು ಗ್ರಾಮಸ್ಥ ಅಮ್ಮಡಿ ರಾಜೇಶ್ ಒತ್ತಾಯಿಸಿದ್ದಾರೆ.</p>.<p><strong>ಜನಪ್ರತಿನಿಧಿಗಳು ಕಾಳಜಿ ವಹಿಸುತ್ತಿಲ್ಲ: </strong>‘ರಸ್ತೆ ಕುರಿತು ಜನಪ್ರತಿನಿಧಿಗಳು ಕಾಳಜಿ ವಹಿಸುತ್ತಿಲ್ಲ. ರಸ್ತೆ ಮಾಡಿ 4 ವರ್ಷ ಕಳೆಯುವುದರೊಳಗೆ ಹೊಂಡ ಗುಂಡಿಗಳಿಂದಾಗಿ ನಡೆದಾಡಲು ಸಾಧ್ಯವಾಗುತ್ತಿಲ್ಲ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ಹೊಂಡ ಗುಂಡಿಗಳಲ್ಲಿ ನೀರು ನಿಲ್ಲುವಂತಾಗಿದೆ’ ಎಂದು ಗ್ರಾಮಸ್ಥ ಅಮ್ಮಡಿ ಅಶೋಕ್ ಹೇಳಿದ್ದಾರೆ.</p>.<p><strong>ಸಮಸ್ಯೆ ನಿವಾರಿಸುವಂತೆ ಒತ್ತಾಯ: </strong>ಗ್ರಾಮಾಂತರ ಗ್ರಾಮ ಪಂಚಾಯಿತಿ ಸದಸ್ಯ ಎಚ್.ಆರ್. ಸಂಜೀವ ಮಾತನಾಡಿ, ‘ಈ ಭಾಗದಲ್ಲಿ ಆಶ್ರಯ ನಿವೇಶನಕ್ಕೆ 6 ಎಕರೆ ಜಾಗ ಮಂಜೂರಾಗಿದೆ. ಈ ಹಿಂದೆ ಶಾಸಕ ರಾಜೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾಗ ರಸ್ತೆ ಸಮಸ್ಯೆ ಅರಿತು, ರಸ್ತೆ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ತಂದಿದ್ದರು. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಯೂ ಮುಗಿದಿತ್ತು. ಸಮಸ್ಯೆ ನಿವಾರಿಸುವಂತೆ ನಾವೂ ಒತ್ತಾಯಿಸಿದ್ದೇವೆ’ ಎಂದು ಹೇಳಿದ್ದಾರೆ.</p>.<p><strong>ಪ್ರತಿಭಟನೆಯ ಎಚ್ಚರಿಕೆ</strong><br />ಶಾಸಕ ಟಿ.ಡಿ. ರಾಜೇಗೌಡ ಅವರು ಪ್ರತಿಕ್ರಿಯಿಸಿ, ‘ಹಿಂದಿನ ಸರ್ಕಾರವಿದ್ದಾಗ ಮಂಜೂರಾದ ರಸ್ತೆ ಕಾಮಗಾರಿ ತಾತ್ಕಾಲಿಕ ತಡೆ ಹಿಡಿದ್ದಾರೆ. ಹಣ ನೀಡುವುದಾಗಿ ಹೇಳಿದ್ದಾರೆ, ಒಂದು ವೇಳೆ ಅನುದಾನ ಬಿಡುಗಡೆಗೊಳಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗೆ ಮನವಿ ನೀಡಿ, ಮುಖ್ಯಮಂತ್ರಿಗೆ ಕಳುಹಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>