<p>ಬಾಳೆಹೊನ್ನೂರು: ಮಾಹಿತಿ ಹಕ್ಕು ಅಡಿ ಸಲ್ಲಿಸಿದ ಅರ್ಜಿ, ಮೇಲ್ಮನವಿಗಳನ್ನು ಜಿಲ್ಲಾಧಿಕಾರಿ ಕಚೇರಿ ಹಾಗೂ ಉಪ ವಿಭಾಗಾಧಿಕಾರಿಗಳ ಕಚೇರಿ ಸಿಬ್ಬಂದಿ ಕಡೆಗಣಿಸುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಸುರೇಶ್ ಹುಲ್ಸೆ ಆರೋಪಿಸಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ಹಕ್ಕು ಅಡಿ ಅರ್ಜಿ ಸಲ್ಲಿಸಿದಾಗ ನಿರ್ದಿಷ್ಟ ಪುಟಗಳಿಗೆ ಖುದ್ದಾಗಿ ಕಚೇರಿಗೆ ಬಂದು ಹಣ ಕಟ್ಟುವಂತೆ ಸೂಚಿಸಿ ಹಿಂಬರಹ ನೀಡಲಾಗುತ್ತದೆ. ಆದರೆ ಮಾಹಿತಿ ಹಕ್ಕು ಕಾಯ್ದೆ ಅಡಿ ಈ ರೀತಿ ತಿಳಿಸಲು ಅವಕಾಶವಿಲ್ಲ. ಮಾಹಿತಿಗೆ ಸಂಬಂಧ ಜ.8ರಂದು ಪೋಸ್ಟಲ್ ಆರ್ಡರ್ ಪಡೆದು ಕಚೇರಿಗೆ ಖುದ್ದಾಗಿ ನೀಡಿದರೂ ಸಿಬ್ಬಂದಿಗಳು ಸ್ವೀಕೃತಿ ಪತ್ರವನ್ನೂ ನೀಡದೆ, ಮಾಹಿತಿಯನ್ನು ಇದೂವರೆಗೂ ಒದಗಿಸಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.</p>.<p>ಉಪ ವಿಭಾಗಾಧಿಕಾರಿಗೆ ಸಲ್ಲಿಸಿದ ಮೇಲ್ಮನವಿಗಳನ್ನು ತಿಂಗಳು ಕಳೆದರೂ ಪರಿಗಣಿಸುತ್ತಿಲ್ಲ. ಎರಡು ಮೂರು ತಿಂಗಳ ನಂತರ ಒಂದು ದಿನದ ಅಂತರದಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ತಿಳಿಸುತ್ತಿದ್ದಾರೆ. ಅಧಿಕಾರಿಗಳ ವರ್ತನೆ ಕುರಿತು ಮಾಹಿತಿ ಹಕ್ಕು ಆಯೋಗಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-126-1951114372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಳೆಹೊನ್ನೂರು: ಮಾಹಿತಿ ಹಕ್ಕು ಅಡಿ ಸಲ್ಲಿಸಿದ ಅರ್ಜಿ, ಮೇಲ್ಮನವಿಗಳನ್ನು ಜಿಲ್ಲಾಧಿಕಾರಿ ಕಚೇರಿ ಹಾಗೂ ಉಪ ವಿಭಾಗಾಧಿಕಾರಿಗಳ ಕಚೇರಿ ಸಿಬ್ಬಂದಿ ಕಡೆಗಣಿಸುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಸುರೇಶ್ ಹುಲ್ಸೆ ಆರೋಪಿಸಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ಹಕ್ಕು ಅಡಿ ಅರ್ಜಿ ಸಲ್ಲಿಸಿದಾಗ ನಿರ್ದಿಷ್ಟ ಪುಟಗಳಿಗೆ ಖುದ್ದಾಗಿ ಕಚೇರಿಗೆ ಬಂದು ಹಣ ಕಟ್ಟುವಂತೆ ಸೂಚಿಸಿ ಹಿಂಬರಹ ನೀಡಲಾಗುತ್ತದೆ. ಆದರೆ ಮಾಹಿತಿ ಹಕ್ಕು ಕಾಯ್ದೆ ಅಡಿ ಈ ರೀತಿ ತಿಳಿಸಲು ಅವಕಾಶವಿಲ್ಲ. ಮಾಹಿತಿಗೆ ಸಂಬಂಧ ಜ.8ರಂದು ಪೋಸ್ಟಲ್ ಆರ್ಡರ್ ಪಡೆದು ಕಚೇರಿಗೆ ಖುದ್ದಾಗಿ ನೀಡಿದರೂ ಸಿಬ್ಬಂದಿಗಳು ಸ್ವೀಕೃತಿ ಪತ್ರವನ್ನೂ ನೀಡದೆ, ಮಾಹಿತಿಯನ್ನು ಇದೂವರೆಗೂ ಒದಗಿಸಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.</p>.<p>ಉಪ ವಿಭಾಗಾಧಿಕಾರಿಗೆ ಸಲ್ಲಿಸಿದ ಮೇಲ್ಮನವಿಗಳನ್ನು ತಿಂಗಳು ಕಳೆದರೂ ಪರಿಗಣಿಸುತ್ತಿಲ್ಲ. ಎರಡು ಮೂರು ತಿಂಗಳ ನಂತರ ಒಂದು ದಿನದ ಅಂತರದಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ತಿಳಿಸುತ್ತಿದ್ದಾರೆ. ಅಧಿಕಾರಿಗಳ ವರ್ತನೆ ಕುರಿತು ಮಾಹಿತಿ ಹಕ್ಕು ಆಯೋಗಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-126-1951114372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>