<p><strong>ಚಿಕ್ಕಮಗಳೂರು</strong>: ಕಡೂರು ತಾಲ್ಲೂಕು ಮದಗದ ಕೆರೆಯ ಮಣ್ಣಿನ ಅಕ್ರಮ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.</p>.<p>ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಸೋಮು ನಾಯಕ್ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಅಕ್ರಮ ಮಣ್ಣು ಸಾಗಣೆ ದಂಧೆ ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.</p>.<p>ರೈತರೆಂದು ಹೇಳಿಕೊಳ್ಳುವ ಹಲವರು ಮದಗದ ಕೆರೆ ಬಗೆದು ಮಣ್ಣನ್ನು ಟ್ರ್ಯಾಕ್ಟರ್ ಮತ್ತು ಲಾರಿಗಳಲ್ಲಿ ಸಾಗಿಸಿ ಮಾರಾಟ ಮಾಡುತ್ತಿದ್ದಾರೆ. ಈ ದಂಧೆ ಹಗಲು– ರಾತ್ರಿ ಎನ್ನದೇ ಹಲವು ದಿನಗಳಿಂದ ನಡೆಯುತ್ತಿದೆ ಎಂದು ದೂರಿದರು.</p>.<p>ಕೆರೆ ಒಡಲು ಬಗೆದು ಮಣ್ಣು ಸಾಗಿಸುತ್ತಿರುವುದರಿಂದಾಗಿ ಮದಗದ ಕೆರೆ ಪಾತ್ರದಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಗುಂಡಿಗಳಾಗಿದ್ದು, ಅದರಲ್ಲಿ ಮಕ್ಕಳು, ಜನ, ಜಾನುವಾರುಗಳು ಬಿದ್ದು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದರು.</p>.<p>ಅಕ್ರಮವಾಗಿ ಮಣ್ಣು ಬಗೆಯುವುದರಿಂದ ಕೆರೆಯ ಪಾತ್ರ ಬರಿದಾಗುತ್ತಿದೆ. ಮಳೆಗಾಲದ ವೇಳೆ ಅನಾಹುತ ಸಂಭವಿಸುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು. ಮಣ್ಣಿನ ಅಕ್ರಮ ಮಾರಾಟವನ್ನು ತಕ್ಷಣ ತಡೆಗಟ್ಟಬೇಕು ಎಂದು ಆಗ್ರಹಿಸಿದರು.</p>.<p>ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಕುಮಾರ್, ಕಾರ್ಯದರ್ಶಿ ಪಿ.ಲೋಕೇಶ್, ನಿರ್ದೇಶಕ ಶಿವಕುಮಾರ್, ತಾಲೂಕು ಉಪಾಧ್ಯಕ್ಷ ರೂಪೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಕಡೂರು ತಾಲ್ಲೂಕು ಮದಗದ ಕೆರೆಯ ಮಣ್ಣಿನ ಅಕ್ರಮ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.</p>.<p>ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಸೋಮು ನಾಯಕ್ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಅಕ್ರಮ ಮಣ್ಣು ಸಾಗಣೆ ದಂಧೆ ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.</p>.<p>ರೈತರೆಂದು ಹೇಳಿಕೊಳ್ಳುವ ಹಲವರು ಮದಗದ ಕೆರೆ ಬಗೆದು ಮಣ್ಣನ್ನು ಟ್ರ್ಯಾಕ್ಟರ್ ಮತ್ತು ಲಾರಿಗಳಲ್ಲಿ ಸಾಗಿಸಿ ಮಾರಾಟ ಮಾಡುತ್ತಿದ್ದಾರೆ. ಈ ದಂಧೆ ಹಗಲು– ರಾತ್ರಿ ಎನ್ನದೇ ಹಲವು ದಿನಗಳಿಂದ ನಡೆಯುತ್ತಿದೆ ಎಂದು ದೂರಿದರು.</p>.<p>ಕೆರೆ ಒಡಲು ಬಗೆದು ಮಣ್ಣು ಸಾಗಿಸುತ್ತಿರುವುದರಿಂದಾಗಿ ಮದಗದ ಕೆರೆ ಪಾತ್ರದಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಗುಂಡಿಗಳಾಗಿದ್ದು, ಅದರಲ್ಲಿ ಮಕ್ಕಳು, ಜನ, ಜಾನುವಾರುಗಳು ಬಿದ್ದು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದರು.</p>.<p>ಅಕ್ರಮವಾಗಿ ಮಣ್ಣು ಬಗೆಯುವುದರಿಂದ ಕೆರೆಯ ಪಾತ್ರ ಬರಿದಾಗುತ್ತಿದೆ. ಮಳೆಗಾಲದ ವೇಳೆ ಅನಾಹುತ ಸಂಭವಿಸುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು. ಮಣ್ಣಿನ ಅಕ್ರಮ ಮಾರಾಟವನ್ನು ತಕ್ಷಣ ತಡೆಗಟ್ಟಬೇಕು ಎಂದು ಆಗ್ರಹಿಸಿದರು.</p>.<p>ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಕುಮಾರ್, ಕಾರ್ಯದರ್ಶಿ ಪಿ.ಲೋಕೇಶ್, ನಿರ್ದೇಶಕ ಶಿವಕುಮಾರ್, ತಾಲೂಕು ಉಪಾಧ್ಯಕ್ಷ ರೂಪೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>