ಹಬ್ಬಕ್ಕಾಗಿ ಬೆಂಗಳೂರು, ಮಂಗಳೂರು, ಶಿವಮೊಗ್ಗ ಭಾಗಗಳಿಂದ ಬಂದ ಸ್ಥಳೀಯರು ತಮ್ಮ ಸ್ವಗ್ರಾಮಗಳಿಗೆ ತೆರಳಲು ದುಬಾರಿ ಬಾಡಿಗೆ ನೀಡಿ ಖಾಸಗಿ ವಾಹನಗಳಲ್ಲಿ ತೆರಳಿದರು. ಹಬ್ಬದ ಖರೀದಿಗಾಗಿ ಗ್ರಾಮೀಣ ಭಾಗಗಳಿಂದ ಪಟ್ಟಣಕ್ಕೆ ಬರಲು ಹಾಗೂ ಬಿಂಡಿಗಾ ದೇವೀರಮ್ಮನ ಜಾತ್ರೆಗೆ ತೆರಳಿದ್ದವರು ಸ್ವಗ್ರಾಮಗಳಿಗೆ ತೆರಳಲು ಪರದಾಡಿದರು.