‘ಜಿಲ್ಲೆಯು ಪ್ರವಾಸಿ ಕೇಂದ್ರಕ್ಕೆ ಸೂಕ್ತವಾದ ತಾಣವಾಗಿದ್ದು, ಜಿಲ್ಲೆಗೆ ಮೂಲಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಪಡಿಸುವ ಅಗತ್ಯವಿದೆ. ಜಿಲ್ಲೆಗೊಂದು ತೋಟಗಾರಿಕೆ ವಿಶ್ವವಿದ್ಯಾಲಯದ ಅಗತ್ಯವಿದ್ದು, ಈಗಿರುವ ತೋಟಗಾರಿಕೆ ಕಾಲೇಜಿನಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಅವಕಾಶವಿದ್ದು, ಅದನ್ನು ಜಾರಿಗೊಳಿಸುವ ನಿಷ್ಠೆ ಕಾಣಬೇಕಿದೆ. ಸಮಾಜದಲ್ಲಿ ಸಾಹಿತಿಗಳು, ಕಲಾವಿದರು ಹಾಗೂ ಜನಸಾಮಾನ್ಯರ ನಡುವೆ ಇರುವ ಅಂತರ ಕಡಿಮೆಯಾಗಬೇಕಿದೆ. ಸಾಹಿತಿಗಳು ಹಾಗೂ ಕಲಾವಿದರ ಪ್ರಯೋಜನವನ್ನು ಜನಸಾಮಾನ್ಯರು ಪಡೆಯುವಂತಾಗಬೇಕು’ ಎಂಬ ಆಶಯ ವ್ಯಕ್ತಪಡಿಸಿದರು.