ಶನಿವಾರ ಉಪವಿಭಾಗಾಧಿಕಾರಿ ಡಾ.ನಾಗರಾಜ್, ಅವಿಶ್ವಾಸ ಗೊತ್ತುವಳಿ ಬಗ್ಗೆ ಸದಸ್ಯರ ಅಭಿಪ್ರಾಯ ಕೇಳಿದರು. ಎಲ್ಲ 14 ಸದಸ್ಯರು ಶ್ರೇಯಾಂಸ ಕುಮಾರ್ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿದಾಗ ಗೊತ್ತುವಳಿ ಸ್ವೀಕಾರ ಆಯಿತು. ಶ್ರೇಯಾಂಸ ಕುಮಾರ್ ಸಭೆಗೆ ಹಾಜರಾಗಿರಲಿಲ್ಲ. 15 ಸದಸ್ಯರು ಇರುವ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ 9 ಸದಸ್ಯರು, ಕಾಂಗ್ರೆಸ್ ಬೆಂಬಲಿತ ಐವರು ಮತ್ತು ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಇದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಸಿಕ್ಕಿದೆ.ಜೆಡಿಎಸ್ ಬೆಂಬಲಿತ ಸದಸ್ಯರೊಬ್ಬರು ಅಧ್ಯಕ್ಷರಾಗಿ ಆಯ್ಕೆ ಆಗುವ ನಿರೀಕ್ಷೆ ಇದೆ.