ಚಿಕ್ಕಮಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ (ಬಿ.ವಿಜಯ್ ಕುಮಾರ್) ಅಂತ್ಯಕ್ರಿಯೆಗೆ ಕಡೂರು ತಾಲ್ಲೂಕಿನ ಪಂಚನಹಳ್ಳಿ ತೋಟದಲ್ಲಿ ಸಿದ್ಧತೆ ನಡೆದಿವೆ.
ವಿಜಯ್ ಅವರ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಪಾರ್ಥಿವ ಶರೀರ ಮಧ್ಯಾಹ್ನ 2.30ರ ಹೊತ್ತಿಗೆ ಗ್ರಾಮಕ್ಕೆ ತಲುಪಲಿದೆ. ಅಂತಿಮ ದರ್ಶನಕ್ಕೆ ಗ್ರಾಮಸ್ಥರಿಗೆ ಅವಕಾಶ ಕಲ್ಪಿಸಿ, ನಂತರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ರಘು ಅವರು 'ಪ್ರಜಾವಾಣಿ'ಗೆ ತಿಳಿಸಿದರು.