<p><strong>ಚಿಕ್ಕಮಗಳೂರು:</strong> ‘ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 2 ವರ್ಷದಲ್ಲಿ ಒಟ್ಟು ₹529 ಕೋಟಿ ವೆಚ್ಚದ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ ಬಹಳಷ್ಟು ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>‘ಅಧಿಕಾರಕ್ಕೆ ಬಂದು 2 ವರ್ಷದಲ್ಲಿ ನುಡಿದಂತೆ 5ಗ್ಯಾರಂಟಿಗಳನ್ನು ಪೂರೈಸಿದ್ದೇವೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಮೂಲಕ ಹೊಸ ಕಂದಾಯ ಗ್ರಾಮಗಳಿಗೆ ಹಕ್ಕುಪತ್ರ ನೀಡಲಿದ್ದೇವೆ. ಬಡವರ, ಶೋಷಿತರ ಏಳಿಗೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆ ಅನುಷ್ಠಾನ ಮಾಡುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.</p>.<p>ಭದ್ರಾ ಉಪಕಣಿವೆ ಯೋಜನೆಯಲ್ಲಿ ಚಿಕ್ಕಮಗಳೂರು ವಿಭಾಗಕ್ಕೆ ದೊರೆಯುವ ಹಣ ಹೊರತುಪಡಿಸಿ ₹529 ಕೋಟಿ ಅನುದಾನವನ್ನು ಸರ್ಕಾರ ಒದಗಿಸಿದೆ. ಬಸವ ತತ್ವ ಪೀಠದ ಮೂಲಸೌಕರ್ಯಗಳ ಅಭಿವೃದ್ಧಿಗೆ ₹50 ಲಕ್ಷ, ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧಕ್ಕೆ ₹56 ಕೋಟಿ ಮಂಜೂರಾತಿ ದೊರೆತಿದೆ ಎಂದು ಹೇಳಿದರು.</p>.<p>ಕ್ಷೇತ್ರದಲ್ಲಿ ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ₹6.50 ಕೋಟಿ, ಜಿಲ್ಲಾ ಮುಖ್ಯ ರಸ್ತೆ ಮತ್ತು ಇತರೆ ರಸ್ತೆಗಳ ಅಭಿವೃದ್ಧಿಗೆ ₹41.5 ಕೋಟಿ, ಕಳೆದ ವರ್ಷ ನೆರೆ ಹಾವಳಿಯಿಂದ ಹಾನಿಯಾದ ರಸ್ತೆ ಸೇತುವೆ ಅಭಿವೃದ್ಧಿಗೆ ₹290 ಲಕ್ಷ, ಜಿಲ್ಲಾ ಗ್ರಾಹಕರ ಆಯೋಗದ ಕಟ್ಟಡದ ನವೀಕರಣಕ್ಕೆ ₹36.26 ಲಕ್ಷ ಬಿಡುಗಡೆಯಾಗಿದೆ ಎಂದರು.</p>.<p>ನಗರದ ಗ್ರಾಮೀಣ ಬಸ್ ನಿಲ್ದಾಣದ ಉನ್ನತೀಕರಣಕ್ಕೆ ₹19.87 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗೆ ₹10 ಕೋಟಿ ಬಿಡುಗಡೆ ಮಾಡಲಾಗಿದೆ. ಎಸ್ಸಿ, ಎಸ್ಟಿ ಕಾರ್ಯಕ್ರಮದಡಿ ₹1.50 ಕೋಟಿ, ಗ್ರಾಮೀಣ ರಸ್ತೆ ನಿರ್ವಹಣೆಗೆ ₹88 ಲಕ್ಷ, ಜಲಸಂಪನ್ಮೂಲ ಇಲಾಖೆಗೆ ವಿವಿಧ ಜಲಮೂಲಗಳ ಅಭಿವೃದ್ಧಿಗೆ ₹25 ಕೋಟಿ ಅನುಮೋದನೆ ನೀಡಲಾಗಿದೆ. ಭದ್ರಾ ಉಪಕಣಿವೆ ಯೋಜನೆ ಅಡಿ ಕೆರೆ ತುಂಬಿಸುವ ಕಾಮಗಾರಿಗೆ ₹407.50 ಕೋಟಿ ಮೊತ್ತಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.</p>.<p>ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಅಭಿವೃದ್ಧಿಗೆ ಈ ಹಿಂದೆ ₹3.37 ಕೋಟಿ ಬಿಡುಗಡೆಯಾಗಿತ್ತು. ಬಾಕಿ ₹1.93 ಕೋಟಿ ಜತೆಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ₹5 ಕೋಟಿಯನ್ನು ಸಿಎಸ್ಆರ್ ನಿಧಿಯಡಿ ನೀಡಲು ಜಿಲ್ಲಾ ಸಚಿವರು ಒಪ್ಪಿದ್ದಾರೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಕಲ್ಯಾಣ ನಗರದ ಒಳಾಂಗಣ ಕ್ರೀಡಾಂಗಣದ ಬಾಸ್ಕೆಟ್ ಬಾಲ್ ಅಂಕಣಕ್ಕೆ ಮರದ ನೆಲಹಾಸು ಅಳವಡಿಸುವ ಕಾಮಗಾರಿಗೆ ₹75 ಲಕ್ಷ ಅನುದಾನ ಒದಗಿಸಲಾಗಿದೆ ಎಂದರು.</p>.<p>ಕ್ಷೇತ್ರದ 216 ಗ್ರಾಮಗಳ ಫಲಾನುಭವಿಗಳಿಗೆ ಕಂದಾಯ ಗ್ರಾಮ ಹಾಗೂ ಉಪಗ್ರಾಮಗಳ ಘೋಷಣೆಯೊಂದಿಗೆ ಹಕ್ಕುಪತ್ರ ನೀಡಲಾಗುವುದು ಎಂದರು.</p>.<p>ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಮುಖಂಡರಾದ ಮಹಡಿಮನೆ ಸತೀಶ್, ತನೋಜ್, ಮಲ್ಲೇಶಸ್ವಾಮಿ, ಪ್ರವೀಣ್, ಸಾದಬ್, ರೂಬಿನ್ ಮೊಸೆಸ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<p> <strong>ನಗರದ ರಸ್ತೆ ಡಾಂಬರ್ಗೆ ₹10 ಕೋಟಿ</strong></p><p> ನಗರದ ವಿವಿಧ ರಸ್ತೆ ಡಾಂಬರೀಕರಣಕ್ಕೆ ₹10 ಕೋಟಿ ವಿಶೇಷ ಅನುದಾನ ಬಂದಿದೆ ಎಂದು ಎಚ್.ಡಿ.ತಮ್ಮಯ್ಯ ತಿಳಿಸಿದರು. ಪ್ರಗತಿ ಕಾಲೋನಿ ಯೋಜನೆ ಅಡಿ ₹2.50 ಕೋಟಿ ಮಲ್ಲೇನಹಳ್ಳಿ ಮೊರಾರ್ಜಿ ಶಾಲಾ ಕಟ್ಟಡಕ್ಕೆ ₹22 ಕೋಟಿ ಸೇರಿದಂತೆ ಕ್ಷೇತ್ರದಲ್ಲಿ ಒಟ್ಟು ₹529 ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 2 ವರ್ಷದಲ್ಲಿ ಒಟ್ಟು ₹529 ಕೋಟಿ ವೆಚ್ಚದ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ ಬಹಳಷ್ಟು ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>‘ಅಧಿಕಾರಕ್ಕೆ ಬಂದು 2 ವರ್ಷದಲ್ಲಿ ನುಡಿದಂತೆ 5ಗ್ಯಾರಂಟಿಗಳನ್ನು ಪೂರೈಸಿದ್ದೇವೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಮೂಲಕ ಹೊಸ ಕಂದಾಯ ಗ್ರಾಮಗಳಿಗೆ ಹಕ್ಕುಪತ್ರ ನೀಡಲಿದ್ದೇವೆ. ಬಡವರ, ಶೋಷಿತರ ಏಳಿಗೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆ ಅನುಷ್ಠಾನ ಮಾಡುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.</p>.<p>ಭದ್ರಾ ಉಪಕಣಿವೆ ಯೋಜನೆಯಲ್ಲಿ ಚಿಕ್ಕಮಗಳೂರು ವಿಭಾಗಕ್ಕೆ ದೊರೆಯುವ ಹಣ ಹೊರತುಪಡಿಸಿ ₹529 ಕೋಟಿ ಅನುದಾನವನ್ನು ಸರ್ಕಾರ ಒದಗಿಸಿದೆ. ಬಸವ ತತ್ವ ಪೀಠದ ಮೂಲಸೌಕರ್ಯಗಳ ಅಭಿವೃದ್ಧಿಗೆ ₹50 ಲಕ್ಷ, ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧಕ್ಕೆ ₹56 ಕೋಟಿ ಮಂಜೂರಾತಿ ದೊರೆತಿದೆ ಎಂದು ಹೇಳಿದರು.</p>.<p>ಕ್ಷೇತ್ರದಲ್ಲಿ ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ₹6.50 ಕೋಟಿ, ಜಿಲ್ಲಾ ಮುಖ್ಯ ರಸ್ತೆ ಮತ್ತು ಇತರೆ ರಸ್ತೆಗಳ ಅಭಿವೃದ್ಧಿಗೆ ₹41.5 ಕೋಟಿ, ಕಳೆದ ವರ್ಷ ನೆರೆ ಹಾವಳಿಯಿಂದ ಹಾನಿಯಾದ ರಸ್ತೆ ಸೇತುವೆ ಅಭಿವೃದ್ಧಿಗೆ ₹290 ಲಕ್ಷ, ಜಿಲ್ಲಾ ಗ್ರಾಹಕರ ಆಯೋಗದ ಕಟ್ಟಡದ ನವೀಕರಣಕ್ಕೆ ₹36.26 ಲಕ್ಷ ಬಿಡುಗಡೆಯಾಗಿದೆ ಎಂದರು.</p>.<p>ನಗರದ ಗ್ರಾಮೀಣ ಬಸ್ ನಿಲ್ದಾಣದ ಉನ್ನತೀಕರಣಕ್ಕೆ ₹19.87 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗೆ ₹10 ಕೋಟಿ ಬಿಡುಗಡೆ ಮಾಡಲಾಗಿದೆ. ಎಸ್ಸಿ, ಎಸ್ಟಿ ಕಾರ್ಯಕ್ರಮದಡಿ ₹1.50 ಕೋಟಿ, ಗ್ರಾಮೀಣ ರಸ್ತೆ ನಿರ್ವಹಣೆಗೆ ₹88 ಲಕ್ಷ, ಜಲಸಂಪನ್ಮೂಲ ಇಲಾಖೆಗೆ ವಿವಿಧ ಜಲಮೂಲಗಳ ಅಭಿವೃದ್ಧಿಗೆ ₹25 ಕೋಟಿ ಅನುಮೋದನೆ ನೀಡಲಾಗಿದೆ. ಭದ್ರಾ ಉಪಕಣಿವೆ ಯೋಜನೆ ಅಡಿ ಕೆರೆ ತುಂಬಿಸುವ ಕಾಮಗಾರಿಗೆ ₹407.50 ಕೋಟಿ ಮೊತ್ತಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.</p>.<p>ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಅಭಿವೃದ್ಧಿಗೆ ಈ ಹಿಂದೆ ₹3.37 ಕೋಟಿ ಬಿಡುಗಡೆಯಾಗಿತ್ತು. ಬಾಕಿ ₹1.93 ಕೋಟಿ ಜತೆಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ₹5 ಕೋಟಿಯನ್ನು ಸಿಎಸ್ಆರ್ ನಿಧಿಯಡಿ ನೀಡಲು ಜಿಲ್ಲಾ ಸಚಿವರು ಒಪ್ಪಿದ್ದಾರೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಕಲ್ಯಾಣ ನಗರದ ಒಳಾಂಗಣ ಕ್ರೀಡಾಂಗಣದ ಬಾಸ್ಕೆಟ್ ಬಾಲ್ ಅಂಕಣಕ್ಕೆ ಮರದ ನೆಲಹಾಸು ಅಳವಡಿಸುವ ಕಾಮಗಾರಿಗೆ ₹75 ಲಕ್ಷ ಅನುದಾನ ಒದಗಿಸಲಾಗಿದೆ ಎಂದರು.</p>.<p>ಕ್ಷೇತ್ರದ 216 ಗ್ರಾಮಗಳ ಫಲಾನುಭವಿಗಳಿಗೆ ಕಂದಾಯ ಗ್ರಾಮ ಹಾಗೂ ಉಪಗ್ರಾಮಗಳ ಘೋಷಣೆಯೊಂದಿಗೆ ಹಕ್ಕುಪತ್ರ ನೀಡಲಾಗುವುದು ಎಂದರು.</p>.<p>ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಮುಖಂಡರಾದ ಮಹಡಿಮನೆ ಸತೀಶ್, ತನೋಜ್, ಮಲ್ಲೇಶಸ್ವಾಮಿ, ಪ್ರವೀಣ್, ಸಾದಬ್, ರೂಬಿನ್ ಮೊಸೆಸ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<p> <strong>ನಗರದ ರಸ್ತೆ ಡಾಂಬರ್ಗೆ ₹10 ಕೋಟಿ</strong></p><p> ನಗರದ ವಿವಿಧ ರಸ್ತೆ ಡಾಂಬರೀಕರಣಕ್ಕೆ ₹10 ಕೋಟಿ ವಿಶೇಷ ಅನುದಾನ ಬಂದಿದೆ ಎಂದು ಎಚ್.ಡಿ.ತಮ್ಮಯ್ಯ ತಿಳಿಸಿದರು. ಪ್ರಗತಿ ಕಾಲೋನಿ ಯೋಜನೆ ಅಡಿ ₹2.50 ಕೋಟಿ ಮಲ್ಲೇನಹಳ್ಳಿ ಮೊರಾರ್ಜಿ ಶಾಲಾ ಕಟ್ಟಡಕ್ಕೆ ₹22 ಕೋಟಿ ಸೇರಿದಂತೆ ಕ್ಷೇತ್ರದಲ್ಲಿ ಒಟ್ಟು ₹529 ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>