<p><strong>ಚಿಕ್ಕಮಗಳೂರು</strong>: ‘ಭಾರತೀಯ ಪರಂಪರೆಯಲ್ಲಿ ಆ.15– ಸ್ವಾತಂತ್ರ್ಯೋತ್ಸವ, ನ.26– ಸಂವಿಧಾನ ದಿವಸ, ಜ.26– ಗಣರಾಜ್ಯೋತ್ಸವ ಮಹತ್ವದ ಮೂರು ದಿನಗಳು. ಈ ದಿನಗಳ ಕುರಿತು ಎಲ್ಲರಿಗೂ ಅರಿವು ಮೂಡಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ನಗರದ ಜಿಲ್ಲಾ ಆಟದ ಮೈದಾನದಲ್ಲಿ ಬುಧವಾರ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು. ‘ಈ ಮೂರು ದಿನಗಳು ಸಂಭ್ರಮದ ದಿನಗಳು ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನ ಪಾಲಿಗೂ ಆತ್ಮವಾಲೋಕನದ ದಿನಗಳು. ಭೂತಕಾಲದ ಪರಂಪರೆ, ವರ್ತಮಾನದ ಸಮಸ್ಯೆ–ಸವಾಲುಗಳು, ಭವಿಷ್ಯದ ಕನಸು ಈ ಮೂರು ಕಾಲದ ಅರಿವನ್ನು ಮನನ ಮಾಡುವ ಪವಿತ್ರ ದಿನಗಳು. ಭಾರತದ ಶ್ರೀಮಂತ ಪರಂಪರೆಯ ಹೆಜ್ಜೆಗಳನ್ನು ಅನುಸರಿಸಿ ನಡೆಯಬೇಕಾದ, ದೇಶದ ಘನತೆ– ಸಾರ್ವಭೌಮತೆ ಎತ್ತಿ ಹಿಡಿಯುವ ಸಂಕಲ್ಪ ಮಾಡಬೇಕಾದ ಅಪೂರ್ವ ದಿನಗಳು’ ಎಂದು ಬಣ್ಣಿಸಿದರು.</p>.<p>ಭಾರತವು 75 ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ಸಾಮಾಜಿಕ ನ್ಯಾಯವು ಸರ್ವರಿಗೂ ದೊರೆತಾಗ ಸಂವಿಧಾನಕ್ಕೆ ನಿಜವಾದ ಗೌರವ ಸಲ್ಲುತ್ತದೆ ಎಂದು ಹೇಳಿದರು.</p>.<p>1949 ನ. 26ರಂದು ಸಂವಿಧಾನ ರಚನೆ ಪೂರ್ಣಗೊಂಡಿತ್ತು. ಆ ದಿನದ ಸ್ಮರಣೆ ನಿಮಿತ್ತ ಪ್ರಧಾನಿ ಮೋದಿ ಅವರು 2015 ರಿಂದ ನ.26 ಅನ್ನು ಸಂವಿಧಾನ ದಿವಸ ಎಂದು ಘೋಷಿಸಿ ಸಂವಿಧಾನದ ಅರಿವಿನ ಆಚರಣೆ ಮಾಡುವಂತೆ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ 3710 ಜನವಸತಿ ಗ್ರಾಮಗಳಿದ್ದು, 2.27 ಲಕ್ಷ ಕುಟುಂಬಗಳಿವೆ. ಈವರೆಗೆ 1.23 ಲಕ್ಷ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ನಳ ಸಂಪರ್ಕ ಕಲ್ಪಿಸಲಾಗಿದೆ.</p>.<p>ತರೀಕೆರೆ, ಅಜ್ಜಂಪುರ, ಕಡೂರು, ಚಿಕ್ಕಮಗಳೂರು ತಾಲ್ಲೂಕುಗಳ 930 ಜನವಸತಿ ಪ್ರದೇಶಗಳಿಗೆ 1040 ಕೋಟಿ ವೆಚ್ಚದಲ್ಲಿ ‘ಜಲ-ಜೀವನ ಮಿಷನ್’ ಅಡಿ ಕುಡಿಯುವ ನೀರು ಒದಗಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ಆಯುಷ್ಮಾನ್ ಭಾರತ ಯೋಜನೆಯಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಗುರುತಿಸುವ ಕಾರ್ಯ ರಾಷ್ಟ್ರದಲ್ಲೇ ಪ್ರಥಮವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೂರ್ಣಗೊಂಡಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಐದು ಲಕ್ಷ ಮಂದಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದೆ ಎಂದರು.</p>.<p>ಚಿಕ್ಕಮಗಳೂರು ಮತ್ತು ಹಾಸನ ರೈಲು ಮಾರ್ಗದ ಭೂಸ್ವಾಧೀನವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೂರ್ಣಗೊಂಡಿದೆ. ಬೇಲೂರು– ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಭಾರತ ಮಾಲಾ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಭೂ ಸಾರಿಗೆ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಎಸ್.ಶ್ರುತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಭಾರತೀಯ ಪರಂಪರೆಯಲ್ಲಿ ಆ.15– ಸ್ವಾತಂತ್ರ್ಯೋತ್ಸವ, ನ.26– ಸಂವಿಧಾನ ದಿವಸ, ಜ.26– ಗಣರಾಜ್ಯೋತ್ಸವ ಮಹತ್ವದ ಮೂರು ದಿನಗಳು. ಈ ದಿನಗಳ ಕುರಿತು ಎಲ್ಲರಿಗೂ ಅರಿವು ಮೂಡಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ನಗರದ ಜಿಲ್ಲಾ ಆಟದ ಮೈದಾನದಲ್ಲಿ ಬುಧವಾರ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು. ‘ಈ ಮೂರು ದಿನಗಳು ಸಂಭ್ರಮದ ದಿನಗಳು ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನ ಪಾಲಿಗೂ ಆತ್ಮವಾಲೋಕನದ ದಿನಗಳು. ಭೂತಕಾಲದ ಪರಂಪರೆ, ವರ್ತಮಾನದ ಸಮಸ್ಯೆ–ಸವಾಲುಗಳು, ಭವಿಷ್ಯದ ಕನಸು ಈ ಮೂರು ಕಾಲದ ಅರಿವನ್ನು ಮನನ ಮಾಡುವ ಪವಿತ್ರ ದಿನಗಳು. ಭಾರತದ ಶ್ರೀಮಂತ ಪರಂಪರೆಯ ಹೆಜ್ಜೆಗಳನ್ನು ಅನುಸರಿಸಿ ನಡೆಯಬೇಕಾದ, ದೇಶದ ಘನತೆ– ಸಾರ್ವಭೌಮತೆ ಎತ್ತಿ ಹಿಡಿಯುವ ಸಂಕಲ್ಪ ಮಾಡಬೇಕಾದ ಅಪೂರ್ವ ದಿನಗಳು’ ಎಂದು ಬಣ್ಣಿಸಿದರು.</p>.<p>ಭಾರತವು 75 ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ಸಾಮಾಜಿಕ ನ್ಯಾಯವು ಸರ್ವರಿಗೂ ದೊರೆತಾಗ ಸಂವಿಧಾನಕ್ಕೆ ನಿಜವಾದ ಗೌರವ ಸಲ್ಲುತ್ತದೆ ಎಂದು ಹೇಳಿದರು.</p>.<p>1949 ನ. 26ರಂದು ಸಂವಿಧಾನ ರಚನೆ ಪೂರ್ಣಗೊಂಡಿತ್ತು. ಆ ದಿನದ ಸ್ಮರಣೆ ನಿಮಿತ್ತ ಪ್ರಧಾನಿ ಮೋದಿ ಅವರು 2015 ರಿಂದ ನ.26 ಅನ್ನು ಸಂವಿಧಾನ ದಿವಸ ಎಂದು ಘೋಷಿಸಿ ಸಂವಿಧಾನದ ಅರಿವಿನ ಆಚರಣೆ ಮಾಡುವಂತೆ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ 3710 ಜನವಸತಿ ಗ್ರಾಮಗಳಿದ್ದು, 2.27 ಲಕ್ಷ ಕುಟುಂಬಗಳಿವೆ. ಈವರೆಗೆ 1.23 ಲಕ್ಷ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ನಳ ಸಂಪರ್ಕ ಕಲ್ಪಿಸಲಾಗಿದೆ.</p>.<p>ತರೀಕೆರೆ, ಅಜ್ಜಂಪುರ, ಕಡೂರು, ಚಿಕ್ಕಮಗಳೂರು ತಾಲ್ಲೂಕುಗಳ 930 ಜನವಸತಿ ಪ್ರದೇಶಗಳಿಗೆ 1040 ಕೋಟಿ ವೆಚ್ಚದಲ್ಲಿ ‘ಜಲ-ಜೀವನ ಮಿಷನ್’ ಅಡಿ ಕುಡಿಯುವ ನೀರು ಒದಗಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ಆಯುಷ್ಮಾನ್ ಭಾರತ ಯೋಜನೆಯಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಗುರುತಿಸುವ ಕಾರ್ಯ ರಾಷ್ಟ್ರದಲ್ಲೇ ಪ್ರಥಮವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೂರ್ಣಗೊಂಡಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಐದು ಲಕ್ಷ ಮಂದಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದೆ ಎಂದರು.</p>.<p>ಚಿಕ್ಕಮಗಳೂರು ಮತ್ತು ಹಾಸನ ರೈಲು ಮಾರ್ಗದ ಭೂಸ್ವಾಧೀನವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೂರ್ಣಗೊಂಡಿದೆ. ಬೇಲೂರು– ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಭಾರತ ಮಾಲಾ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಭೂ ಸಾರಿಗೆ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಎಸ್.ಶ್ರುತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>