<p><strong>ಕೊಟ್ಟಿಗೆಹಾರ</strong>: ಸರ್ಕಾರ ಗ್ರಾಮ ಪಂಚಾಯಿತಿ ಮೂಲಕ ಜಾರಿಗೆ ತಂದಿರುವ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟವು ಮಹಿಳೆಯರ ಆರ್ಥಿಕ ಉತ್ತೇಜನಕ್ಕೆ ಪೂರಕವಾಗಿದೆ ಎಂದು ಜಾವಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ. ಪ್ರದೀಪ್ ಹೇಳಿದರು.</p>.<p>ಜಾವಳಿಯಲ್ಲಿ ನಡೆದ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆಯಯಲ್ಲಿ ಅವರು ಮಾತನಾಡಿದರು. ಸ್ವಸಹಾಯ ಸಂಘಗಳಿಗೆ ಪಂಚಾಯಿತಿ ಮೂಲಕ ಅನುದಾನ ನೀಡಲಾಗುತ್ತಿದೆ. ಸ್ವಂತ ಉದ್ಯೋಗ ಮಾಡುವ ಮೂಲಕ ಮಹಿಳೆಯರು ಸಬಲರಾಗಬಹುದು ಎಂದರು.</p>.<p>ಪಂಚಾಯಿತಿ ಉಪಾಧ್ಯಕ್ಷ ಮನೋಹರ್ ಮಾತನಾಡಿ, ‘ಮಹಿಳಾ ಸಂಘಗಳ ಒಕ್ಕೂಟಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸರ್ಕಾರ ಸಾಲ ನೀಡುತ್ತದೆ. ಕೃಷಿ ಮತ್ತು ಕೃಷಿಯೇತರ ಕೆಲಸಗಳನ್ನು ಮಾಡಿ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಒಕ್ಕೂಟದ ಸದಸ್ಯರು ಸಹಕಾರ ನೀಡಬೇಕು’ ಎಂದರು.</p>.<p>ಒಕ್ಕೂಟದ ಅಧ್ಯಕ್ಷೆ ಯಮುನಾ ಮಾತನಾಡಿ, ಮಹಿಳೆಯರು ಸ್ವಸಹಾಯ ಸಂಘಕ್ಕೆ ಸೇರಿ ಸರ್ಕಾರ ನೀಡುವ ಅನುದಾನ ಬಳಸಿಕೊಂಡು ಉದ್ಯಮಶೀಲರಾಗಬೇಕು ಎಂದರು.</p>.<p>ಒಕ್ಕೂಟದ ಸಾಮಾಜಿಕ ಲೆಕ್ಕ ಪರಿಶೋಧನೆಯ ವಾರ್ಷಿಕ ವರದಿಯನ್ನು ಅರ್ಚನಾ ವಾಚಿಸಿದರು. ಪಿಡಿಒ ಯತೀಶ್ ಕುಮಾರ್, ಒಕ್ಕೂಟದ ಅಧ್ಯಕ್ಷೆ ಕುಸುಮಾ, ಸದಸ್ಯೆ ನಂದಿನಿ ಹಾಗೂ ಪಂಚಾಯಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಿಗೆಹಾರ</strong>: ಸರ್ಕಾರ ಗ್ರಾಮ ಪಂಚಾಯಿತಿ ಮೂಲಕ ಜಾರಿಗೆ ತಂದಿರುವ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟವು ಮಹಿಳೆಯರ ಆರ್ಥಿಕ ಉತ್ತೇಜನಕ್ಕೆ ಪೂರಕವಾಗಿದೆ ಎಂದು ಜಾವಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ. ಪ್ರದೀಪ್ ಹೇಳಿದರು.</p>.<p>ಜಾವಳಿಯಲ್ಲಿ ನಡೆದ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆಯಯಲ್ಲಿ ಅವರು ಮಾತನಾಡಿದರು. ಸ್ವಸಹಾಯ ಸಂಘಗಳಿಗೆ ಪಂಚಾಯಿತಿ ಮೂಲಕ ಅನುದಾನ ನೀಡಲಾಗುತ್ತಿದೆ. ಸ್ವಂತ ಉದ್ಯೋಗ ಮಾಡುವ ಮೂಲಕ ಮಹಿಳೆಯರು ಸಬಲರಾಗಬಹುದು ಎಂದರು.</p>.<p>ಪಂಚಾಯಿತಿ ಉಪಾಧ್ಯಕ್ಷ ಮನೋಹರ್ ಮಾತನಾಡಿ, ‘ಮಹಿಳಾ ಸಂಘಗಳ ಒಕ್ಕೂಟಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸರ್ಕಾರ ಸಾಲ ನೀಡುತ್ತದೆ. ಕೃಷಿ ಮತ್ತು ಕೃಷಿಯೇತರ ಕೆಲಸಗಳನ್ನು ಮಾಡಿ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಒಕ್ಕೂಟದ ಸದಸ್ಯರು ಸಹಕಾರ ನೀಡಬೇಕು’ ಎಂದರು.</p>.<p>ಒಕ್ಕೂಟದ ಅಧ್ಯಕ್ಷೆ ಯಮುನಾ ಮಾತನಾಡಿ, ಮಹಿಳೆಯರು ಸ್ವಸಹಾಯ ಸಂಘಕ್ಕೆ ಸೇರಿ ಸರ್ಕಾರ ನೀಡುವ ಅನುದಾನ ಬಳಸಿಕೊಂಡು ಉದ್ಯಮಶೀಲರಾಗಬೇಕು ಎಂದರು.</p>.<p>ಒಕ್ಕೂಟದ ಸಾಮಾಜಿಕ ಲೆಕ್ಕ ಪರಿಶೋಧನೆಯ ವಾರ್ಷಿಕ ವರದಿಯನ್ನು ಅರ್ಚನಾ ವಾಚಿಸಿದರು. ಪಿಡಿಒ ಯತೀಶ್ ಕುಮಾರ್, ಒಕ್ಕೂಟದ ಅಧ್ಯಕ್ಷೆ ಕುಸುಮಾ, ಸದಸ್ಯೆ ನಂದಿನಿ ಹಾಗೂ ಪಂಚಾಯಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>