<p><strong>ಬೀರೂರು</strong>: ‘ಭಾರತದ ಎಲ್ಲ ಭಾಷೆಗಳಿಗೂ ಸಂಸ್ಕೃತವು ತಾಯಿಬೇರಿನಂತಿದ್ದು, ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸಂಸ್ಕೃತ ಕಲಿಸಲು ಆದ್ಯತೆ ನೀಡಬೇಕಿದೆ’ ಎಂದು ತರಳಬಾಳು ವೇದ, ಸಂಸ್ಕೃತ ಮತ್ತು ಜ್ಯೋತಿಷ್ಯ ಶಾಲೆಯ ಮುಖ್ಯಶಿಕ್ಷಕ ಶಂಕರ ಎಂ.ಹೆಬ್ಬಾರ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ, ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ‘ಅಸ್ಮಾಕಂ ಸಂಸ್ಕೃತಂ’ ಸಂಸ್ಕೃತ ಕಲಿಕಾ ಸರಣಿ ಕಾರ್ಯಕ್ರಮದಲ್ಲಿ ‘ಸಂಸ್ಕೃತ ಭಾಷೆಯ ಹಿರಿಮೆ ಮತ್ತು ಮಹತ್ವ’ ಕುರಿತು ಉಪನ್ಯಾಸ ನೀಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಚಿದಾನಂದಮೂರ್ತಿ, ‘ಸಂಸ್ಕೃತ ಭಾಷೆಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ದೇವ ಭಾಷೆಯೆಂದು ಕರೆಯುತ್ತಾರೆ. ಮಕ್ಕಳು ಆಸಕ್ತಿಯಿಂದ ಪ್ರಯತ್ನಿಸಿದರೆ ಕನ್ನಡದಷ್ಟೇ ಸರಳವಾಗಿ ಸಂಸ್ಕೃತ ಕಲಿಯಲು ಸಾಧ್ಯವಿದ್ದು, ನಮ್ಮ ಸಂಸ್ಥೆಯ ಸಂಸ್ಕೃತ- ವೇದ ಪಾಠಶಾಲೆ ಉಪಯುಕ್ತತೆ ಪಡೆಯಬೇಕು’ ಎಂದರು.</p>.<p>ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿ.ಸಿ.ಗೀತಾರಾಣಿ, ಅನಂತೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀರೂರು</strong>: ‘ಭಾರತದ ಎಲ್ಲ ಭಾಷೆಗಳಿಗೂ ಸಂಸ್ಕೃತವು ತಾಯಿಬೇರಿನಂತಿದ್ದು, ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸಂಸ್ಕೃತ ಕಲಿಸಲು ಆದ್ಯತೆ ನೀಡಬೇಕಿದೆ’ ಎಂದು ತರಳಬಾಳು ವೇದ, ಸಂಸ್ಕೃತ ಮತ್ತು ಜ್ಯೋತಿಷ್ಯ ಶಾಲೆಯ ಮುಖ್ಯಶಿಕ್ಷಕ ಶಂಕರ ಎಂ.ಹೆಬ್ಬಾರ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ, ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ‘ಅಸ್ಮಾಕಂ ಸಂಸ್ಕೃತಂ’ ಸಂಸ್ಕೃತ ಕಲಿಕಾ ಸರಣಿ ಕಾರ್ಯಕ್ರಮದಲ್ಲಿ ‘ಸಂಸ್ಕೃತ ಭಾಷೆಯ ಹಿರಿಮೆ ಮತ್ತು ಮಹತ್ವ’ ಕುರಿತು ಉಪನ್ಯಾಸ ನೀಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಚಿದಾನಂದಮೂರ್ತಿ, ‘ಸಂಸ್ಕೃತ ಭಾಷೆಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ದೇವ ಭಾಷೆಯೆಂದು ಕರೆಯುತ್ತಾರೆ. ಮಕ್ಕಳು ಆಸಕ್ತಿಯಿಂದ ಪ್ರಯತ್ನಿಸಿದರೆ ಕನ್ನಡದಷ್ಟೇ ಸರಳವಾಗಿ ಸಂಸ್ಕೃತ ಕಲಿಯಲು ಸಾಧ್ಯವಿದ್ದು, ನಮ್ಮ ಸಂಸ್ಥೆಯ ಸಂಸ್ಕೃತ- ವೇದ ಪಾಠಶಾಲೆ ಉಪಯುಕ್ತತೆ ಪಡೆಯಬೇಕು’ ಎಂದರು.</p>.<p>ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿ.ಸಿ.ಗೀತಾರಾಣಿ, ಅನಂತೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>