<p><strong>ಚಿಕ್ಕಮಗಳೂರು: </strong>ಯುಪಿಎಸ್ಸಿ (ಕೇಂದ್ರ ಲೋಕಸೇವಾ ಆಯೋಗ) ಪರೀಕ್ಷೆ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಕಡೂರು ತಾಲ್ಲೂಕು ಬೀರೂರಿನ ಎಚ್.ಸಂತೋಷ್ ಅವರು 751ನೇ ರ್ಯಾಂಕ್ ಪಡೆದು ಸಾಧನೆ ಮೆರೆದಿದ್ದಾರೆ.<br /><br />ಸಂತೋಷ್ ಅವರು ವೀಳ್ಯದೆಲೆ ವ್ಯಾಪಾರಿ ಎಂ. ಹನುಮಂತಪ್ಪ ಮತ್ತು ಟಿ. ಗೀತಾ ದಂಪತಿ ಪುತ್ರ . ಕಳೆದ ಬಾರಿ 753ನೇ ರ್ಯಾಂಕ್ ಪಡೆದಿದ್ದರು.<br /><br />ಸಂತೋಷ ಅವರು ಅಜ್ಜಂಪುರ ತಾಲ್ಲೂಕಿನ ಮುದಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದಾರೆ. ಅಜ್ಜಂಪುರದ ಶೆಟ್ರುಸಿದ್ದಪ್ಪ ಸರ್ಕಾರಿ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾಭ್ಯಾಸ ಮಾಡಿದ್ದಾರೆ. ಚಿಕ್ಕಮಗಳೂರಿನ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ 2010ರಲ್ಲಿ ಡಿಪ್ಲೊಮಾ (ಮೆಕ್ಯಾನಿಕಲ್) ವ್ಯಾಸಂಗ ಪೂರೈಸಿದ್ದಾರೆ.<br /><br />ಬೆಂಗಳೂರ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣದಲ್ಲಿ 2017ರಲ್ಲಿ ಬಿ.ಎ (ಇತಿಹಾಸ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ) ಪದವಿ ಪಡೆದಿದ್ದಾರೆ. ಎಸ್ಬಿಎಂನಲ್ಲಿ (ಸ್ಟೇಟ್ ಬ್ಯಾಂಕ್ ಆಫ್ ಮೈಸೂರು) ಕರ್ಕ್ ಆಗಿ 2011ರ ಡಿಸೆಂಬರ್ನಲ್ಲಿ ನೇಮಕವಾಗಿ, ಮೈಸೂರಿನಲ್ಲಿ ಕಾರ್ಯನಿರ್ವಹಿಸಿದ್ದಾರೆ.</p>.<p>ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ತಾಂತ್ರಿಕ ಹುದ್ದೆಗೆ 2014ರ ಅಕ್ಟೋಬರ್ನಲ್ಲಿ ನೇಮಕವಾಗಿದ್ದರು, ನಂತರ ಹಿರಿಯ ತಾಂತ್ರಿಕ ಸಹಾಯಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಯುಪಿಎಸ್ಸಿ (ಕೇಂದ್ರ ಲೋಕಸೇವಾ ಆಯೋಗ) ಪರೀಕ್ಷೆ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಕಡೂರು ತಾಲ್ಲೂಕು ಬೀರೂರಿನ ಎಚ್.ಸಂತೋಷ್ ಅವರು 751ನೇ ರ್ಯಾಂಕ್ ಪಡೆದು ಸಾಧನೆ ಮೆರೆದಿದ್ದಾರೆ.<br /><br />ಸಂತೋಷ್ ಅವರು ವೀಳ್ಯದೆಲೆ ವ್ಯಾಪಾರಿ ಎಂ. ಹನುಮಂತಪ್ಪ ಮತ್ತು ಟಿ. ಗೀತಾ ದಂಪತಿ ಪುತ್ರ . ಕಳೆದ ಬಾರಿ 753ನೇ ರ್ಯಾಂಕ್ ಪಡೆದಿದ್ದರು.<br /><br />ಸಂತೋಷ ಅವರು ಅಜ್ಜಂಪುರ ತಾಲ್ಲೂಕಿನ ಮುದಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದಾರೆ. ಅಜ್ಜಂಪುರದ ಶೆಟ್ರುಸಿದ್ದಪ್ಪ ಸರ್ಕಾರಿ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾಭ್ಯಾಸ ಮಾಡಿದ್ದಾರೆ. ಚಿಕ್ಕಮಗಳೂರಿನ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ 2010ರಲ್ಲಿ ಡಿಪ್ಲೊಮಾ (ಮೆಕ್ಯಾನಿಕಲ್) ವ್ಯಾಸಂಗ ಪೂರೈಸಿದ್ದಾರೆ.<br /><br />ಬೆಂಗಳೂರ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣದಲ್ಲಿ 2017ರಲ್ಲಿ ಬಿ.ಎ (ಇತಿಹಾಸ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ) ಪದವಿ ಪಡೆದಿದ್ದಾರೆ. ಎಸ್ಬಿಎಂನಲ್ಲಿ (ಸ್ಟೇಟ್ ಬ್ಯಾಂಕ್ ಆಫ್ ಮೈಸೂರು) ಕರ್ಕ್ ಆಗಿ 2011ರ ಡಿಸೆಂಬರ್ನಲ್ಲಿ ನೇಮಕವಾಗಿ, ಮೈಸೂರಿನಲ್ಲಿ ಕಾರ್ಯನಿರ್ವಹಿಸಿದ್ದಾರೆ.</p>.<p>ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ತಾಂತ್ರಿಕ ಹುದ್ದೆಗೆ 2014ರ ಅಕ್ಟೋಬರ್ನಲ್ಲಿ ನೇಮಕವಾಗಿದ್ದರು, ನಂತರ ಹಿರಿಯ ತಾಂತ್ರಿಕ ಸಹಾಯಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>