<p><strong>ಚಿಕ್ಕಮಗಳೂರು:</strong> ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದೇಶದ ಏಕತೆಗೆ ಕಾರಣಕರ್ತರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಹೇಳಿದರು. </p>.<p>ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಜಿಲ್ಲಾ ಪೊಲೀಸ್ ಕಚೇರಿ ಮುಂಭಾಗದ ಸರ್ಕಲ್ ಬಳಿ ಶುಕ್ರವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ-ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಭಾರತದ ಏಕೀಕರಣಕ್ಕೆ ಅವರು ನೀಡಿರುವ ಕೊಡುಗೆ ಪರಿಗಣಿಸಿ ಅವರನ್ನು ‘ಭಾರತದ ಏಕೀಕರಣದ ರೂವಾರಿ’ ಎಂದು ಕರೆಯಲಾಗುತ್ತದೆ. ಅವರಲ್ಲಿನ ದೇಶಪ್ರೇಮ ಮಾದರಿಯಾಗಿದೆ ಎಂದರು.</p>.<p>ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತೆಯನ್ನು ಕಾಪಾಡಿದ ಹಾಗೂ ಅವುಗಳನ್ನು ತಮ್ಮ ಕಾರ್ಯಗಳ ಮೂಲಕವೇ ಎತ್ತಿ ಹಿಡಿದ ದೇಶದ ಮೊದಲ ಉಪಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲರ ಜೀವನ ಮತ್ತು ಆದರ್ಶಗಳು ಈ ಕಾಲಕ್ಕೂ ಪ್ರಸ್ತುತ ಮತ್ತು ಅನುಕರಣೀಯ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ನಂತರ ಹರಿದು ಹಂಚಿಹೋಗಿದ್ದ ಸಂಸ್ಥಾನಗಳನ್ನು ಭಾರತದ ಒಕ್ಕೂಟದಲ್ಲಿ ಸೇರಿಸಿ ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು. ಅದು ಸುಲಭದ ಕೆಲಸವಾಗಿರಲಿಲ್ಲ ಎಂದರು.</p>.<p>ಸಂಸ್ಥಾನಗಳ ರಾಜ ಮಹಾರಾಜರೊಂದಿಗೆ ಮಾತುಕತೆ ನಡೆಸುವ ಹೊಣೆಗಾರಿಕೆಯನ್ನು ಪಟೇಲ್ ಹಾಗೂ ಭಾರತದ ಕೊನೆಯ ವೈಸರಾಯ್ ಮೌಂಟ್ ಬ್ಯಾಟನ್ರ ರಾಜಕೀಯ ಸಲಹೆಗಾರ ವಿ.ಪಿ.ಮೆನನ್ ಅವರಿಗೆ ಪ್ರಧಾನಿ ಜವಾಹರಲಾಲ್ ನೆಹರು ಅವರು ವಹಿಸಿದರು. ಪರಿಣಾಮಕಾರಿ ಕಾರ್ಯತಂತ್ರ ಮತ್ತು ದೂರದೃಷ್ಟಿಯೊಂದಿಗೆ ಈ ಕೆಲಸಕ್ಕೆ ಅಣಿಯಾದ ಪಟೇಲರು ತಮ್ಮ ಜಾಣ್ಮೆ ಮತ್ತು ಕಠಿಣ ನಿಲುವುಗಳಿಂದಲೇ ಅನೇಕ ಜಟಿಲ ಪರಿಸ್ಥಿತಿಗಳನ್ನು ತಿಳಿಗೊಳಿಸಿದರು ಎಂದು ಹೇಳಿದರು.</p>.<p>ಗುಜರಾತಿನ ಏಕಥಾನ್ ಎಂಬ ನಗರದಲ್ಲಿ ಪ್ರಧಾನ ಮಂತ್ರಿ ಅವರು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸುತ್ತಾರೆ. ದೊಡ್ಡ ಮಟ್ಟದಲ್ಲಿ ಪೊಲೀಸ್ ಪೆರೇಡ್ ನಡೆಯುತ್ತದೆ ಎಂದು ತಿಳಿಸಿದರು.</p>.<p>ಅನಂತರ ತಾಲ್ಲೂಕು ಕಚೇರಿ ತನಕ ನಡೆದ ಮ್ಯಾರಥಾನ್ ನಡೆಯಿತು. ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಜ್ಞಾ ವಿಧಿ ಬೋಧಿಸಿದರು. </p>.<p>ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಡಿವೈಎಸ್ಪಿ ಶೈಲೇಂದ್ರ, ಪೊಲೀಸರು, ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದೇಶದ ಏಕತೆಗೆ ಕಾರಣಕರ್ತರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಹೇಳಿದರು. </p>.<p>ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಜಿಲ್ಲಾ ಪೊಲೀಸ್ ಕಚೇರಿ ಮುಂಭಾಗದ ಸರ್ಕಲ್ ಬಳಿ ಶುಕ್ರವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ-ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಭಾರತದ ಏಕೀಕರಣಕ್ಕೆ ಅವರು ನೀಡಿರುವ ಕೊಡುಗೆ ಪರಿಗಣಿಸಿ ಅವರನ್ನು ‘ಭಾರತದ ಏಕೀಕರಣದ ರೂವಾರಿ’ ಎಂದು ಕರೆಯಲಾಗುತ್ತದೆ. ಅವರಲ್ಲಿನ ದೇಶಪ್ರೇಮ ಮಾದರಿಯಾಗಿದೆ ಎಂದರು.</p>.<p>ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತೆಯನ್ನು ಕಾಪಾಡಿದ ಹಾಗೂ ಅವುಗಳನ್ನು ತಮ್ಮ ಕಾರ್ಯಗಳ ಮೂಲಕವೇ ಎತ್ತಿ ಹಿಡಿದ ದೇಶದ ಮೊದಲ ಉಪಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲರ ಜೀವನ ಮತ್ತು ಆದರ್ಶಗಳು ಈ ಕಾಲಕ್ಕೂ ಪ್ರಸ್ತುತ ಮತ್ತು ಅನುಕರಣೀಯ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ನಂತರ ಹರಿದು ಹಂಚಿಹೋಗಿದ್ದ ಸಂಸ್ಥಾನಗಳನ್ನು ಭಾರತದ ಒಕ್ಕೂಟದಲ್ಲಿ ಸೇರಿಸಿ ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು. ಅದು ಸುಲಭದ ಕೆಲಸವಾಗಿರಲಿಲ್ಲ ಎಂದರು.</p>.<p>ಸಂಸ್ಥಾನಗಳ ರಾಜ ಮಹಾರಾಜರೊಂದಿಗೆ ಮಾತುಕತೆ ನಡೆಸುವ ಹೊಣೆಗಾರಿಕೆಯನ್ನು ಪಟೇಲ್ ಹಾಗೂ ಭಾರತದ ಕೊನೆಯ ವೈಸರಾಯ್ ಮೌಂಟ್ ಬ್ಯಾಟನ್ರ ರಾಜಕೀಯ ಸಲಹೆಗಾರ ವಿ.ಪಿ.ಮೆನನ್ ಅವರಿಗೆ ಪ್ರಧಾನಿ ಜವಾಹರಲಾಲ್ ನೆಹರು ಅವರು ವಹಿಸಿದರು. ಪರಿಣಾಮಕಾರಿ ಕಾರ್ಯತಂತ್ರ ಮತ್ತು ದೂರದೃಷ್ಟಿಯೊಂದಿಗೆ ಈ ಕೆಲಸಕ್ಕೆ ಅಣಿಯಾದ ಪಟೇಲರು ತಮ್ಮ ಜಾಣ್ಮೆ ಮತ್ತು ಕಠಿಣ ನಿಲುವುಗಳಿಂದಲೇ ಅನೇಕ ಜಟಿಲ ಪರಿಸ್ಥಿತಿಗಳನ್ನು ತಿಳಿಗೊಳಿಸಿದರು ಎಂದು ಹೇಳಿದರು.</p>.<p>ಗುಜರಾತಿನ ಏಕಥಾನ್ ಎಂಬ ನಗರದಲ್ಲಿ ಪ್ರಧಾನ ಮಂತ್ರಿ ಅವರು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸುತ್ತಾರೆ. ದೊಡ್ಡ ಮಟ್ಟದಲ್ಲಿ ಪೊಲೀಸ್ ಪೆರೇಡ್ ನಡೆಯುತ್ತದೆ ಎಂದು ತಿಳಿಸಿದರು.</p>.<p>ಅನಂತರ ತಾಲ್ಲೂಕು ಕಚೇರಿ ತನಕ ನಡೆದ ಮ್ಯಾರಥಾನ್ ನಡೆಯಿತು. ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಜ್ಞಾ ವಿಧಿ ಬೋಧಿಸಿದರು. </p>.<p>ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಡಿವೈಎಸ್ಪಿ ಶೈಲೇಂದ್ರ, ಪೊಲೀಸರು, ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>