<p><strong>ಚಿಕ್ಕಮಗಳೂರು: </strong>‘ಸಂವಿಧಾನದಲ್ಲಿನ ಕಾಯ್ದೆ, ಕಾನೂನುಗಳನ್ನು ನಾಶ ಮಾಡುವ ಹುನ್ನಾರ ನಡೆಯುತ್ತಿದೆ. ತಳಸಮುದಾಯಗಳವರು ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಘಟಕದ ವತಿಯಿಂದ ನಗರದ ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ‘ಸರ್ವಜನರ– ಸಂವಿಧಾನ ಸಮಾವೇಶ’ (ಸಾಮಾಜಿಕ ಪಾಲುದಾರಿಕೆ ಆಗ್ರಹ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರ ಚಿಂತನೆಗಳನ್ನು ಮರೆಮಾಚುವ ಕೆಲಸ ನಡೆಯುತ್ತಿದೆ. ಮೀಸಲಾತಿ ಇಲ್ಲವಾಗಿಸುವ ಹುನ್ನಾರ ವ್ಯವಸ್ಥಿತವಾಗಿ ನಡೆಯುತ್ತಿದೆ. ಅಪಾಯದ ದಿನಗಳು ಎದುರಾಗಿವೆ’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂದು ಕೆಲವರು ವಾದ ಮಾಡುತ್ತಾರೆ. ಅಂಥವರು ಇತಿಹಾಸವನ್ನು ಸರಿಯಾಗಿ ಓದಿಕೊಳ್ಳಬೇಕು. ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತಕ್ಕೆ ಅನುಗುಣವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ. ಸಂವಿಧಾನ ಜಾರಿಯಾದ ನಂತರವೇ ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು’ ಎಂದರು.</p>.<p>‘ಸಂವಿಧಾನ ಸರಿಯಿಲ್ಲ ಎಂದು ಕೆಲವರು ತಗಾದೆ ತೆಗೆದಿದ್ದಾರೆ. ಪಾರ್ಲಿಮೆಂಟ್ ಪಕ್ಕದಲ್ಲಿ ಈಚೆಗೆ ಸಂವಿಧಾನ ಪ್ರತಿಯನ್ನು ಕೆಲವರು ಸುಟ್ಟರು. ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ಸಮುದಾಯದವರು ಅಪಾಯದ ಸ್ಥಿತಿಯಲ್ಲಿರುವುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ರಾಷ್ಟ್ರೀಕರಣಕ್ಕೆ ವಿರುದ್ಧವಾಗಿದೆ. ಖಾಸಗೀಕರಣ ನೀತಿಯನ್ನು ಪಠಿಸುತ್ತಿದೆ. ನಿರುದ್ಯೋಗ ತಾಂಡವವಾಡುತ್ತಿದೆ’ ಎಂದರು.</p>.<p>‘ನೆರೆ ಹಾವಳಿಯಿಂದಾಗಿ ರಾಜ್ಯ ಬಹಳಷ್ಟು ಜಿಲ್ಲೆಗಳು ನಲುಗಿವೆ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದರೂ ಪರಿಹಾರದ ಬಗ್ಗೆ ಚಕಾರ ಎತ್ತಿಲ್ಲ. ರಾಜ್ಯಕ್ಕೆ ಬಿಡಿಗಾಸು ನೆರವನ್ನೂ ಈವರೆಗೂ ಘೋಷಿಸಿಲ್ಲ. ಇದು ಸಂವಿಧಾನ ವಿರೋಧಿ ಕೃತ್ಯ’ ಎಂದು ಹೇಳಿದರು.</p>.<p>‘ಸಂವಿಧಾನ ನಮಗೆ ನೀಡಿರುವ ಹಕ್ಕುಗಳು, ಸವಲತ್ತುಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ರಕ್ಷಣೆಯಲ್ಲಿ ನಮ್ಮ ಬದುಕು ಇದೆ ಎಂಬುದನ್ನು ತಿಳಿದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ಮೋಟಮ್ಮ ಮಾತನಾಡಿ, ದಲಿತ ಸಂಘರ್ಷ ಸಮಿತಿ ಸಂಘಟನೆ ಗಟ್ಟಿಯಾಗಿ ಉಳಿದಿಲ್ಲ. ಹಲವರ ಮುಖಂಡತ್ವದಲ್ಲಿ ಒಡೆದುಹೋಗಿದೆ. ಎಲ್ಲರೂ ಒಟ್ಟಾಗಬೇಕು, ಸಂಘಟನೆ ಗಟ್ಟಿಗೊಳಿಸಬೇಕು ಎಂಬುದು ನಮ್ಮ ಆಶಯ ಎಂದರು.</p>.<p>ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಬೇಕಾದರೆ ಎಲ್ಲರೂ ಒಗ್ಗೂಡಬೇಕು. ದೌರ್ಜನ್ಯಗಳು ಆದಾಗ ಸಾಂಕೇತಿಕವಾಗಿಯಾದರೂ ಪ್ರತಿಭಟನೆ ಮಾಡಬೇಕು. ದೌರ್ಜನ್ಯದ ವಿರುದ್ಧ ಧ್ವನಿ ಎತ್ತಲು ಹೋರಾಟ ಮಾರ್ಗ ರೂಪಿಸುವುದು ಮುಖ್ಯ ಎಂದರು.</p>.<p>ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಗಂಗಯ್ಯ, ಬಿಸ್ಲಳ್ಳಿ ಮೂರ್ತಿ, ಬಿ.ಕೆ.ವಸಂತ್, ಶ್ರೀನಿವಾಸಮೂರ್ತಿ, ನಂಜುಂಡಯ್ಯ, ಮಲ್ಲೇಶ್ ಅಂಬುಗ, ಎಲ್.ಚಂದು, ಯು.ಸಿ.ರಮೇಶ್, ಕೃಷ್ಣಪ್ಪ, ಕಂಠಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ಸಂವಿಧಾನದಲ್ಲಿನ ಕಾಯ್ದೆ, ಕಾನೂನುಗಳನ್ನು ನಾಶ ಮಾಡುವ ಹುನ್ನಾರ ನಡೆಯುತ್ತಿದೆ. ತಳಸಮುದಾಯಗಳವರು ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಘಟಕದ ವತಿಯಿಂದ ನಗರದ ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ‘ಸರ್ವಜನರ– ಸಂವಿಧಾನ ಸಮಾವೇಶ’ (ಸಾಮಾಜಿಕ ಪಾಲುದಾರಿಕೆ ಆಗ್ರಹ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರ ಚಿಂತನೆಗಳನ್ನು ಮರೆಮಾಚುವ ಕೆಲಸ ನಡೆಯುತ್ತಿದೆ. ಮೀಸಲಾತಿ ಇಲ್ಲವಾಗಿಸುವ ಹುನ್ನಾರ ವ್ಯವಸ್ಥಿತವಾಗಿ ನಡೆಯುತ್ತಿದೆ. ಅಪಾಯದ ದಿನಗಳು ಎದುರಾಗಿವೆ’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂದು ಕೆಲವರು ವಾದ ಮಾಡುತ್ತಾರೆ. ಅಂಥವರು ಇತಿಹಾಸವನ್ನು ಸರಿಯಾಗಿ ಓದಿಕೊಳ್ಳಬೇಕು. ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತಕ್ಕೆ ಅನುಗುಣವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ. ಸಂವಿಧಾನ ಜಾರಿಯಾದ ನಂತರವೇ ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು’ ಎಂದರು.</p>.<p>‘ಸಂವಿಧಾನ ಸರಿಯಿಲ್ಲ ಎಂದು ಕೆಲವರು ತಗಾದೆ ತೆಗೆದಿದ್ದಾರೆ. ಪಾರ್ಲಿಮೆಂಟ್ ಪಕ್ಕದಲ್ಲಿ ಈಚೆಗೆ ಸಂವಿಧಾನ ಪ್ರತಿಯನ್ನು ಕೆಲವರು ಸುಟ್ಟರು. ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ಸಮುದಾಯದವರು ಅಪಾಯದ ಸ್ಥಿತಿಯಲ್ಲಿರುವುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ರಾಷ್ಟ್ರೀಕರಣಕ್ಕೆ ವಿರುದ್ಧವಾಗಿದೆ. ಖಾಸಗೀಕರಣ ನೀತಿಯನ್ನು ಪಠಿಸುತ್ತಿದೆ. ನಿರುದ್ಯೋಗ ತಾಂಡವವಾಡುತ್ತಿದೆ’ ಎಂದರು.</p>.<p>‘ನೆರೆ ಹಾವಳಿಯಿಂದಾಗಿ ರಾಜ್ಯ ಬಹಳಷ್ಟು ಜಿಲ್ಲೆಗಳು ನಲುಗಿವೆ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದರೂ ಪರಿಹಾರದ ಬಗ್ಗೆ ಚಕಾರ ಎತ್ತಿಲ್ಲ. ರಾಜ್ಯಕ್ಕೆ ಬಿಡಿಗಾಸು ನೆರವನ್ನೂ ಈವರೆಗೂ ಘೋಷಿಸಿಲ್ಲ. ಇದು ಸಂವಿಧಾನ ವಿರೋಧಿ ಕೃತ್ಯ’ ಎಂದು ಹೇಳಿದರು.</p>.<p>‘ಸಂವಿಧಾನ ನಮಗೆ ನೀಡಿರುವ ಹಕ್ಕುಗಳು, ಸವಲತ್ತುಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ರಕ್ಷಣೆಯಲ್ಲಿ ನಮ್ಮ ಬದುಕು ಇದೆ ಎಂಬುದನ್ನು ತಿಳಿದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ಮೋಟಮ್ಮ ಮಾತನಾಡಿ, ದಲಿತ ಸಂಘರ್ಷ ಸಮಿತಿ ಸಂಘಟನೆ ಗಟ್ಟಿಯಾಗಿ ಉಳಿದಿಲ್ಲ. ಹಲವರ ಮುಖಂಡತ್ವದಲ್ಲಿ ಒಡೆದುಹೋಗಿದೆ. ಎಲ್ಲರೂ ಒಟ್ಟಾಗಬೇಕು, ಸಂಘಟನೆ ಗಟ್ಟಿಗೊಳಿಸಬೇಕು ಎಂಬುದು ನಮ್ಮ ಆಶಯ ಎಂದರು.</p>.<p>ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಬೇಕಾದರೆ ಎಲ್ಲರೂ ಒಗ್ಗೂಡಬೇಕು. ದೌರ್ಜನ್ಯಗಳು ಆದಾಗ ಸಾಂಕೇತಿಕವಾಗಿಯಾದರೂ ಪ್ರತಿಭಟನೆ ಮಾಡಬೇಕು. ದೌರ್ಜನ್ಯದ ವಿರುದ್ಧ ಧ್ವನಿ ಎತ್ತಲು ಹೋರಾಟ ಮಾರ್ಗ ರೂಪಿಸುವುದು ಮುಖ್ಯ ಎಂದರು.</p>.<p>ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಗಂಗಯ್ಯ, ಬಿಸ್ಲಳ್ಳಿ ಮೂರ್ತಿ, ಬಿ.ಕೆ.ವಸಂತ್, ಶ್ರೀನಿವಾಸಮೂರ್ತಿ, ನಂಜುಂಡಯ್ಯ, ಮಲ್ಲೇಶ್ ಅಂಬುಗ, ಎಲ್.ಚಂದು, ಯು.ಸಿ.ರಮೇಶ್, ಕೃಷ್ಣಪ್ಪ, ಕಂಠಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>