<p><strong>ಚಿಕ್ಕಮಗಳೂರು:</strong> ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ; ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಕೇಂದ್ರ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.</p>.<p>ನಗರದ ಕುವೆಂಪು ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>16ನೇ ಶತಮಾನದಲ್ಲಿ ಸಮಾಜದಲ್ಲಿದ್ದ ವರ್ಗ ಸಂಘರ್ಷ, ಮೇಲು-ಕೀಳು ಹಾಗೂ ಜಾತಿ ಪದ್ಧತಿಯ ವಿರುದ್ಧ ಸರ್ವಜ್ಞ ತಮ್ಮ ಸಾಹಿತ್ಯದ ಮೂಲಕ ದೊಡ್ಡ ಹೋರಾಟವನ್ನೇ ಮಾಡಿದ್ದರು ಎಂದರು.</p>.<p>ಇಂದಿನ ವೇಗದ ಯುಗದಲ್ಲಿ ಜನರು ಸುದೀರ್ಘ ಕಾವ್ಯಗಳನ್ನು ಓದಲು ಸಮಯವಿಲ್ಲದಿದ್ದರೂ, ಸರ್ವಜ್ಞರ ಮೂರೇ ಸಾಲಿನ ತ್ರಿಪದಿಗಳು ಇಂದಿನ ಮಾಹಿತಿ ತಂತ್ರಜ್ಞಾನದ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಹೇಳಿದರು.</p>.<p>ಸರ್ವಜ್ಞ ಎಂದರೆ ಎಲ್ಲವನ್ನೂ ತಿಳಿದವನು ಎಂದರ್ಥ. ಆದರೆ, ಸರ್ವಜ್ಞರು ತಾವು ಎಲ್ಲರ ಬಳಿ ಒಂದೊಂದು ನುಡಿ ಕಲಿತು ಈ ಹಂತಕ್ಕೆ ತಲುಪಿದ್ದಾಗಿ ಹೇಳಿಕೊಳ್ಳುವ ಮೂಲಕ ವಿನಯಕ್ಕೆ ಮಾದರಿ ಆಗಿದ್ದಾರೆ ಎಂದು ತಿಳಿಸಿದರು.</p>.<p>ಕರ್ನಾಟಕದ ಸರ್ವಜ್ಞರು ಮತ್ತು ತಮಿಳುನಾಡಿನ ತಿರುವಳ್ಳುವರ್ ಅವರ ಸಾಹಿತ್ಯ ಮತ್ತು ಜೀವನ ಶೈಲಿಯಲ್ಲಿ ಸಾಮ್ಯತೆಗಳಿವೆ. ಈ ದಾರ್ಶನಿಕರು ಭಾಷೆ ಮತ್ತು ಪ್ರಾದೇಶಿಕ ಗಡಿಗಳನ್ನು ಮೀರಿ ನಿಲ್ಲುತ್ತಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ತಮಿಳುನಾಡಿನಲ್ಲಿ ಸರ್ವಜ್ಞರ ಪ್ರತಿಮೆಯನ್ನು ಸ್ಥಾಪಿಸಿ ಉಭಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ವೃದ್ಧಿಸಲಾಗಿದೆ ಎಂದರು.</p>.<p>ಕೇವಲ ಪಾರಂಪರಿಕ ವೃತ್ತಿಗಳಿಗೆ ಅಂಟಿಕೊಳ್ಳದೆ, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಎಂಜಿನಿಯರ್, ವಕೀಲರು, ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನಾಗಿ ಮಾಡುವಂತೆ ಪೋಷಕರಿಗೆ ಕರೆ ನೀಡಿದರು.</p>.<p>ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿದರು.</p>.<p>ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ಸಿ.ನಾಗಪ್ಪ ಶೆಟ್ಟಿ ಉಪನ್ಯಾಸ ನೀಡಿದರು.</p>.<p>ಉಪತಹಶೀಲ್ದಾರ್ ರಾಮರಾವ್ ದೇಸಾಯಿ, ಜಿಲ್ಲಾ ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಂ.ಗಂಗಾಧರ್, ತಾಲ್ಲೂಕು ಕುಂಬಾರರ ಸಂಘದ ಅಧ್ಯಕ್ಷ ಬಿ.ಆರ್.ಜಯಪ್ರಕಾಶ್, ಮುಖಂಡರಾದ ಎಂ.ಬಿ.ಅಶೋಕ್ ಕುಮಾರ್, ಕೆ.ಪರಮೇಶ್, ಹುಣಸೇಮಕ್ಕಿ ಲಕ್ಷ್ಮಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ; ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಕೇಂದ್ರ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.</p>.<p>ನಗರದ ಕುವೆಂಪು ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>16ನೇ ಶತಮಾನದಲ್ಲಿ ಸಮಾಜದಲ್ಲಿದ್ದ ವರ್ಗ ಸಂಘರ್ಷ, ಮೇಲು-ಕೀಳು ಹಾಗೂ ಜಾತಿ ಪದ್ಧತಿಯ ವಿರುದ್ಧ ಸರ್ವಜ್ಞ ತಮ್ಮ ಸಾಹಿತ್ಯದ ಮೂಲಕ ದೊಡ್ಡ ಹೋರಾಟವನ್ನೇ ಮಾಡಿದ್ದರು ಎಂದರು.</p>.<p>ಇಂದಿನ ವೇಗದ ಯುಗದಲ್ಲಿ ಜನರು ಸುದೀರ್ಘ ಕಾವ್ಯಗಳನ್ನು ಓದಲು ಸಮಯವಿಲ್ಲದಿದ್ದರೂ, ಸರ್ವಜ್ಞರ ಮೂರೇ ಸಾಲಿನ ತ್ರಿಪದಿಗಳು ಇಂದಿನ ಮಾಹಿತಿ ತಂತ್ರಜ್ಞಾನದ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಹೇಳಿದರು.</p>.<p>ಸರ್ವಜ್ಞ ಎಂದರೆ ಎಲ್ಲವನ್ನೂ ತಿಳಿದವನು ಎಂದರ್ಥ. ಆದರೆ, ಸರ್ವಜ್ಞರು ತಾವು ಎಲ್ಲರ ಬಳಿ ಒಂದೊಂದು ನುಡಿ ಕಲಿತು ಈ ಹಂತಕ್ಕೆ ತಲುಪಿದ್ದಾಗಿ ಹೇಳಿಕೊಳ್ಳುವ ಮೂಲಕ ವಿನಯಕ್ಕೆ ಮಾದರಿ ಆಗಿದ್ದಾರೆ ಎಂದು ತಿಳಿಸಿದರು.</p>.<p>ಕರ್ನಾಟಕದ ಸರ್ವಜ್ಞರು ಮತ್ತು ತಮಿಳುನಾಡಿನ ತಿರುವಳ್ಳುವರ್ ಅವರ ಸಾಹಿತ್ಯ ಮತ್ತು ಜೀವನ ಶೈಲಿಯಲ್ಲಿ ಸಾಮ್ಯತೆಗಳಿವೆ. ಈ ದಾರ್ಶನಿಕರು ಭಾಷೆ ಮತ್ತು ಪ್ರಾದೇಶಿಕ ಗಡಿಗಳನ್ನು ಮೀರಿ ನಿಲ್ಲುತ್ತಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ತಮಿಳುನಾಡಿನಲ್ಲಿ ಸರ್ವಜ್ಞರ ಪ್ರತಿಮೆಯನ್ನು ಸ್ಥಾಪಿಸಿ ಉಭಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ವೃದ್ಧಿಸಲಾಗಿದೆ ಎಂದರು.</p>.<p>ಕೇವಲ ಪಾರಂಪರಿಕ ವೃತ್ತಿಗಳಿಗೆ ಅಂಟಿಕೊಳ್ಳದೆ, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಎಂಜಿನಿಯರ್, ವಕೀಲರು, ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನಾಗಿ ಮಾಡುವಂತೆ ಪೋಷಕರಿಗೆ ಕರೆ ನೀಡಿದರು.</p>.<p>ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿದರು.</p>.<p>ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ಸಿ.ನಾಗಪ್ಪ ಶೆಟ್ಟಿ ಉಪನ್ಯಾಸ ನೀಡಿದರು.</p>.<p>ಉಪತಹಶೀಲ್ದಾರ್ ರಾಮರಾವ್ ದೇಸಾಯಿ, ಜಿಲ್ಲಾ ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಂ.ಗಂಗಾಧರ್, ತಾಲ್ಲೂಕು ಕುಂಬಾರರ ಸಂಘದ ಅಧ್ಯಕ್ಷ ಬಿ.ಆರ್.ಜಯಪ್ರಕಾಶ್, ಮುಖಂಡರಾದ ಎಂ.ಬಿ.ಅಶೋಕ್ ಕುಮಾರ್, ಕೆ.ಪರಮೇಶ್, ಹುಣಸೇಮಕ್ಕಿ ಲಕ್ಷ್ಮಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>