ಪಂಚಾಯಿತಿ ಉಪಾಧ್ಯಕ್ಷ ಗುರುವಪ್ಪ ಮಾತನಾಡಿ, ‘ಸರ್ಕಾರದ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ. ಪರಿಹಾರ ದೊರೆಯದಿದ್ದರೆ ಮುಂಬರುವ ದಿನದಲ್ಲಿ ಸತ್ತಿಹಳ್ಳಿ ಪಂಚಾಯಿತಿ ಪ್ರತಿನಿಧಿಗಳು ಹಾಗೂ ನಿವೇಶನರಹಿತ ನಿರಾಶ್ರಿತರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯವರೆಗೂ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗುವುದು’ ಎಂದರು. ಪಂಚಾಯಿತಿ ಅಧ್ಯಕ್ಷೆ ಸಾಹಿರಾಬಾನು, ಸದಸ್ಯರು ಇದ್ದರು.