ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಎಂಎಲ್ವಿ ರೋಟರಿ ಸಭಾಂಗಣ ಭಾನುವಾರ ಏರ್ಪಡಿಸಿದ್ದ ಈದ್ ಸೌಹಾರ್ದ ಕೂಟದಲ್ಲಿ ಮಾತನಾಡಿದರು. ‘ಸೌಹಾರ್ದವು ಧರ್ಮಗಳ ನಡುವೆ ಇರಬೇಕಾದ ಸಂಗತಿ ಅಷ್ಟೇ ಅಲ್ಲ. ಅದು ಪ್ರತಿಯೊಬ್ಬ ಮನುಷ್ಯರಲ್ಲೂ ಇರಬೇಕಾದ ಶ್ರೇಷ್ಠ ಸಂಗತಿ ಎಂಬುದನ್ನು ಗಮನಿಸಬೇಕು. ಮತ್ತೊಬ್ಬರ ನೋವು–ನಲಿವುಗಳನ್ನು ಅವರ ಸ್ಥಾನದಲ್ಲಿ ನಿಂತು ಅರ್ಥೈಸಿಕೊಳ್ಳಬೇಕು. ಒಳಿತು ನಮ್ಮಿಂದಲೇ ಪ್ರಾರಂಭವಾಗಬೇಕು’ ಎಂದು ಕಿವಿಮಾತು ಹೇಳಿದರು.