ಅಧ್ಯಕ್ಷತೆ ವಹಿಸಿ ಗಾಂತವ್ಯ ಶಾಲೆ ವ್ಯವಸ್ಥಾಪಕಿ ನವಿತಾ ಮಾತನಾಡಿ, ‘ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಏಳಿಗೆಗೆ ಸಹಕಾರಿ. ಈ ಶಿಬಿರದಲ್ಲಿ ಹಾಡು, ನೃತ್ಯ, ಬರವಣಿಗೆ, ಸಾಹಿತ್ಯ, ಸಂಗೀತ, ಕಲೆ, ವಿಜ್ಞಾನ ಹೀಗೆ ಹಲವು ವಿಷಯಗಳ ಕುರಿತು ತಿಳಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.