<p>ಚಿಕ್ಕಮಗಳೂರು: ನಿತ್ಯ ಬದುಕಿನಲ್ಲಿ ವಿಜ್ಞಾನ ಎಂಬುದು ಅಡುಗೆ ಮನೆಯಿಂದ ಹಿಡಿದು ಶಾಸ್ತ್ರ, ಸಂಪ್ರದಾಯದವರೆಗೂ ಬಳಕೆಯಲ್ಲಿದೆ. ಇಂದು ವಿಜ್ಞಾನವಿಲ್ಲದೇ ಜೀವನವಿಲ್ಲ ಎನ್ನುವಂತಾಗಿದೆ ಎಂದು ಆವತಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ರೇಖಾ ನಾಗರಾಜರಾವ್ ಹೇಳಿದರು.</p>.<p>ನಗರದ ಕೋಟೆ ಬಡಾವಣೆಯ ಗಾಂತವ್ಯ ನೃತ್ಯ ಶಾಲೆಯಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ ‘ನಿತ್ಯ ಜೀವನ ಮತ್ತು ವಿಜ್ಞಾನ’ ಕುರಿತು ಪ್ರಾತ್ಯಕ್ಷಿಕೆ ನೀಡಿ ಅವರು ಮಾತನಾಡಿದರು.</p>.<p>‘ಪ್ರತಿ ಮಕ್ಕಳು ಮೂಢನಂಬಿಕೆಗಳಿಗೆ ಸಿಲುಕದೆ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು. ವಿಜ್ಞಾನ ನಮ್ಮ ನಿತ್ಯದ ಬದುಕಿಗೆ ಅತ್ಯವಶ್ಯಕ ಎಂಬುದನ್ನು ತಿಳಿದುಕೊಳ್ಳಬೇಕು. ಮರಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಪ್ರಜ್ಞೆ ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿ ಗಾಂತವ್ಯ ಶಾಲೆ ವ್ಯವಸ್ಥಾಪಕಿ ನವಿತಾ ಮಾತನಾಡಿ, ‘ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಏಳಿಗೆಗೆ ಸಹಕಾರಿ. ಈ ಶಿಬಿರದಲ್ಲಿ ಹಾಡು, ನೃತ್ಯ, ಬರವಣಿಗೆ, ಸಾಹಿತ್ಯ, ಸಂಗೀತ, ಕಲೆ, ವಿಜ್ಞಾನ ಹೀಗೆ ಹಲವು ವಿಷಯಗಳ ಕುರಿತು ತಿಳಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಶಿಬಿರದಲ್ಲಿ ಮಕ್ಕಳಿಗೆ ಆಕರ್ಷಣೀಯವಾದ ಕಾಮನ ಬಿಲ್ಲಿನ ಪ್ರಯೋಗ, ಗಾಳಿಯ ಒತ್ತಡ, ಸರಳ ರಾಸಾಯನಿಕ ಕ್ರಿಯೆಗಳ ಪ್ರಯೋಗ ನಡೆಸಿ ಮಕ್ಕಳಿಂದಲೂ ಅವುಗಳನ್ನು ಮಾಡಿಸಿ ಅವರ ಕುತೂಹಲ ಹೆಚ್ಚಿಸಿದರು. ಶಿಬಿರದಲ್ಲಿ 40ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಶಿಕ್ಷಕ ವಿವೇಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ನಿತ್ಯ ಬದುಕಿನಲ್ಲಿ ವಿಜ್ಞಾನ ಎಂಬುದು ಅಡುಗೆ ಮನೆಯಿಂದ ಹಿಡಿದು ಶಾಸ್ತ್ರ, ಸಂಪ್ರದಾಯದವರೆಗೂ ಬಳಕೆಯಲ್ಲಿದೆ. ಇಂದು ವಿಜ್ಞಾನವಿಲ್ಲದೇ ಜೀವನವಿಲ್ಲ ಎನ್ನುವಂತಾಗಿದೆ ಎಂದು ಆವತಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ರೇಖಾ ನಾಗರಾಜರಾವ್ ಹೇಳಿದರು.</p>.<p>ನಗರದ ಕೋಟೆ ಬಡಾವಣೆಯ ಗಾಂತವ್ಯ ನೃತ್ಯ ಶಾಲೆಯಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ ‘ನಿತ್ಯ ಜೀವನ ಮತ್ತು ವಿಜ್ಞಾನ’ ಕುರಿತು ಪ್ರಾತ್ಯಕ್ಷಿಕೆ ನೀಡಿ ಅವರು ಮಾತನಾಡಿದರು.</p>.<p>‘ಪ್ರತಿ ಮಕ್ಕಳು ಮೂಢನಂಬಿಕೆಗಳಿಗೆ ಸಿಲುಕದೆ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು. ವಿಜ್ಞಾನ ನಮ್ಮ ನಿತ್ಯದ ಬದುಕಿಗೆ ಅತ್ಯವಶ್ಯಕ ಎಂಬುದನ್ನು ತಿಳಿದುಕೊಳ್ಳಬೇಕು. ಮರಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಪ್ರಜ್ಞೆ ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿ ಗಾಂತವ್ಯ ಶಾಲೆ ವ್ಯವಸ್ಥಾಪಕಿ ನವಿತಾ ಮಾತನಾಡಿ, ‘ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಏಳಿಗೆಗೆ ಸಹಕಾರಿ. ಈ ಶಿಬಿರದಲ್ಲಿ ಹಾಡು, ನೃತ್ಯ, ಬರವಣಿಗೆ, ಸಾಹಿತ್ಯ, ಸಂಗೀತ, ಕಲೆ, ವಿಜ್ಞಾನ ಹೀಗೆ ಹಲವು ವಿಷಯಗಳ ಕುರಿತು ತಿಳಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಶಿಬಿರದಲ್ಲಿ ಮಕ್ಕಳಿಗೆ ಆಕರ್ಷಣೀಯವಾದ ಕಾಮನ ಬಿಲ್ಲಿನ ಪ್ರಯೋಗ, ಗಾಳಿಯ ಒತ್ತಡ, ಸರಳ ರಾಸಾಯನಿಕ ಕ್ರಿಯೆಗಳ ಪ್ರಯೋಗ ನಡೆಸಿ ಮಕ್ಕಳಿಂದಲೂ ಅವುಗಳನ್ನು ಮಾಡಿಸಿ ಅವರ ಕುತೂಹಲ ಹೆಚ್ಚಿಸಿದರು. ಶಿಬಿರದಲ್ಲಿ 40ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಶಿಕ್ಷಕ ವಿವೇಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>