<figcaption>""</figcaption>.<p><strong>ಚಿಕ್ಕಮಗಳೂರು: </strong>ಜಿಲ್ಲೆಯ ಶೃಂಗೇರಿಯ ಶಂಕರಾಚಾರ್ಯ ವೃತ್ತದಲ್ಲಿನ ಮಂಟಪದ ಗೋಪುರದಲ್ಲಿ ಹಸಿರು, ಕೇಸರಿ, ತಿಳಿ ನೀಲಿ ಬಣ್ಣದ ಬಟ್ಟೆ ಗುರುವಾರ ಬೆಳಿಗ್ಗೆಕಂಡುಬಂದಿದ್ದು, ಗೊಂದಲ ಸೃಷ್ಟಿಸಿದೆ.</p>.<p>ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹಿಂದೂ ಸಂಘಟನೆಗಳವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್ಡಿಪಿಐ ಬಾವುಟ ಹಾಕುತ್ತಾರೆ ಎಂದರೆ ಏನರ್ಥ.ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು’ ಎಂದು ಬಿಜೆಪಿ ಮುಖಂಡ ಡಿ.ಎನ್.ಜೀವರಾಜ್ ಸಹಿತ ಇತರರು ಒತ್ತಾಯಿಸಿದರು. ಜೀವರಾಜ್ ಮತ್ತು ಪೊಲೀಸರ ಮಾತುಕತೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.</p>.<p>‘ಶಂಕರಾಚಾರ್ಯರ ಪ್ರತಿಮೆ ಇರುವ ಗೋಪುರದ ಮೇಲೆ ಮುಸ್ಲಿಂ ಸಂಘಟನೆಯ ಬಾವುಟವನ್ನು ಅವಮಾನಕರವಾಗಿ ಹಾಕಲಾಗಿದೆ. ಎಸ್ಡಿಪಿಐ ಸದಸ್ಯರೇ ಇದನ್ನ ಹಾಕಿದ್ದಾರೆ. ಕೃತ್ಯಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು’ ಎಂದು ಶೃಂಗೇರಿಯ ಅರ್ಜನ್ ಎಂಬಾತ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಈ ಬಗ್ಗೆ ಸಚಿವ ಸಿ.ಟಿ. ರವಿ ಮತ್ತು ಶಾಸಕ ಎಸ್.ಎ. ರಾಮದಾಸ್ ಅವರು ಟ್ವಿಟರ್ನಲ್ಲಿಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಚಿಕ್ಕಮಗಳೂರು: </strong>ಜಿಲ್ಲೆಯ ಶೃಂಗೇರಿಯ ಶಂಕರಾಚಾರ್ಯ ವೃತ್ತದಲ್ಲಿನ ಮಂಟಪದ ಗೋಪುರದಲ್ಲಿ ಹಸಿರು, ಕೇಸರಿ, ತಿಳಿ ನೀಲಿ ಬಣ್ಣದ ಬಟ್ಟೆ ಗುರುವಾರ ಬೆಳಿಗ್ಗೆಕಂಡುಬಂದಿದ್ದು, ಗೊಂದಲ ಸೃಷ್ಟಿಸಿದೆ.</p>.<p>ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹಿಂದೂ ಸಂಘಟನೆಗಳವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್ಡಿಪಿಐ ಬಾವುಟ ಹಾಕುತ್ತಾರೆ ಎಂದರೆ ಏನರ್ಥ.ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು’ ಎಂದು ಬಿಜೆಪಿ ಮುಖಂಡ ಡಿ.ಎನ್.ಜೀವರಾಜ್ ಸಹಿತ ಇತರರು ಒತ್ತಾಯಿಸಿದರು. ಜೀವರಾಜ್ ಮತ್ತು ಪೊಲೀಸರ ಮಾತುಕತೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.</p>.<p>‘ಶಂಕರಾಚಾರ್ಯರ ಪ್ರತಿಮೆ ಇರುವ ಗೋಪುರದ ಮೇಲೆ ಮುಸ್ಲಿಂ ಸಂಘಟನೆಯ ಬಾವುಟವನ್ನು ಅವಮಾನಕರವಾಗಿ ಹಾಕಲಾಗಿದೆ. ಎಸ್ಡಿಪಿಐ ಸದಸ್ಯರೇ ಇದನ್ನ ಹಾಕಿದ್ದಾರೆ. ಕೃತ್ಯಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು’ ಎಂದು ಶೃಂಗೇರಿಯ ಅರ್ಜನ್ ಎಂಬಾತ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಈ ಬಗ್ಗೆ ಸಚಿವ ಸಿ.ಟಿ. ರವಿ ಮತ್ತು ಶಾಸಕ ಎಸ್.ಎ. ರಾಮದಾಸ್ ಅವರು ಟ್ವಿಟರ್ನಲ್ಲಿಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>