ಶುಂಠಿಗದ್ದೆಯಲ್ಲಿ ಬಿತ್ತನೆಯಾಗಿದ್ದ ಶುಂಠಿ ಚಿಗುರೊಡೆಯ ತೊಡಗಿದ್ದು, ಮಣ್ಣು ಕೊಡುವ ಚಟುವಟಿಕೆಗಳು ಬಿರುಸುಗೊಂಡಿವೆ. ಏಕಕಾಲದಲ್ಲಿ ಭತ್ತದ ಗದ್ದೆ, ಕಾಫಿ, ಶುಂಠಿ ಗದ್ದೆಗಳಲ್ಲಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವುದರಿಂದ ಕಾರ್ಮಿಕರಿಗೆ ಇನ್ನಿಲ್ಲದ ಬೇಡಿಕೆ ಬಂದಿದೆ. ಮಳೆಗಾಲ ಆರಂಭಗೊಳ್ಳುವ ಮುನ್ನವೇ ಕೃಷಿ ಚಟುವಟಿಕೆಗಳನ್ನು ಪೂರ್ಣಗೊಳಿಸಬೇಕಿರುವುದರಿಂದ ರೈತಾಪಿ ವರ್ಗವು ಬಿಡುವಿಲ್ಲದ ಚಟುವಟಿಕೆಯಲ್ಲಿ ತೊಡಗಿದೆ.