<p><strong> ಚಿಕ್ಕಮಗಳೂರು: </strong>ಮಲೆನಾಡು ಮತ್ತು ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ರೂಪಿಸುತ್ತೇವೆ. ಈ ಭಾಗಕ್ಕೆ ಆದ್ಯತೆ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ನಗರದ ಬೇಲೂರು ರಸ್ತೆಯ ಆಶ್ರಯ ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಭಾಗದ ನಾಯಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ರೂಪಿಸುತ್ತೇವೆ. ಅಭಿವೃದ್ಧಿ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ’ ಎಂದರು.</p>.<p>ಆಡಳಿತ ಚುಕ್ಕಾಣಿ ಹಿಡಿದರೆ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ, ಕುಟುಂಬಬದ ಯಜಮಾನ್ತಿಗೆ ಮಾಸಿಕ ₹ 2 ಸಾವಿರ, ಅನ್ನಭಾಗ್ಯದಡಿ ₹ 10 ಕೆ.ಜಿ ಅಕ್ಕಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಇವಿಷ್ಟೇ ಅಲ್ಲ ಇನ್ನಷ್ಟು ಕೊಡುಗೆಗಳು ನೀಡುತ್ತೇವೆ ಎಂದು ಆಶ್ವಾಸನೆ ನೀಡಿದರು.</p>.<p>ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಪಿಎಸ್ಐ ನೇಮಕಾತಿ, ವರ್ಗಾವಣೆ ಮೊದಲಾದ ಹಗರಣದಲ್ಲಿ ತೊಡಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನೇ ಕೇಳಿದರೆ ಏನೂ ನಡೆದೇ ಇಲ್ಲ ಎಂದು ಹೇಳುತ್ತಾರೆ ಎಂದು ದೂರಿದರು.</p>.<p>‘ನಾನು ಇಂಧನ ಸಚಿವನಾಗಿದ್ದಾಗ ವಿವಿಧ ಹುದ್ದೆಗಳಿಗೆ 25 ಸಾವಿರ ಮಂದಿ ನೇಮಕಾತಿ ನಡೆದಿದೆ. ಒಬ್ಬರೇ ಒಬ್ಬರಿಂದ ಹಣ ತೆಗೆದುಕೊಂಡಿದ್ದೇನೆ ಎಂದು ಸಾಬೀತು ಪಡಿಸಿದರೆ ರಾಜಕಿಯ ನಿವೃತ್ತಿ ಪಡೆಯುತ್ತೇನೆ’ ಎಂದು ಸವಾಲು ಹಾಕಿದರು.</p>.<p>ರೈತರ ಆದಾಯ ದ್ವಿಗುಣಗೊಳಿಸುದಾಗಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ನಿಗದಿಪಪಿಡುಸುವುದಾಗಿ ಬಿಜೆಪಿ ಹೇಳಿತ್ತು. ಈ ಡಬಲ್ ಎಂಜಿನ್ ಸರ್ಕಾರ ಯಾವುದನ್ನೂ ಮಾಡಿಲ್ಲ. ಬಿಜೆಪಿ ಸರ್ಕಾರುವ ಲಂಚ, ಭ್ರಷ್ಟ ಮತ್ತು ‘ಬಿ’ ರಿಪೋರ್ಟ್ ಸರ್ಕಾರ’ ಎಂದು ಟೀಕಿಸಿದರು.</p>.<p>ಮಲೆನಾಡಿನ ಜನರು ನಮಗೂ ಒಂದು ಅವಕಾಶ ಕೊಡಿ, ನಾನೂ ನಿಮ್ಮವನೇ ತಾನೇ? ನಿಮ್ಮೂರಿನಲ್ಲಿ ನೆಂಟಸ್ತನ ಮಾಡಿದ್ದೀನಿ ತಾನೇ? ನಮಗೂ ಆಶೀರ್ವಾದ ಮಾಡಿ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೋರಿದರು.</p>.<p>ಕೋಟ್</p>.<p>ಟಿಕೆಟ್ ಇಲ್ಲದವರಿಗೆ ಒಂದೊಂದು ಸ್ಥಾನ ಕೊಡುತ್ತೇವೆ. ಪಕ್ಷವನ್ನು ಗೆಲ್ಲಿಸಬೇಕು. ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷ ಹೇಳಿದಂತೆ ಕೇಳಿ, ಗೆಲುವಿಗೆ ಶ್ರಮಿಸಬೇಕು.</p>.<p>ಡಿ.ಕೆ.ಶಿವಕುಮಾರ್, ಅಧ್ಯಕ್ಷ, ಕೆಪಿಸಿಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong> ಚಿಕ್ಕಮಗಳೂರು: </strong>ಮಲೆನಾಡು ಮತ್ತು ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ರೂಪಿಸುತ್ತೇವೆ. ಈ ಭಾಗಕ್ಕೆ ಆದ್ಯತೆ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ನಗರದ ಬೇಲೂರು ರಸ್ತೆಯ ಆಶ್ರಯ ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಭಾಗದ ನಾಯಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ರೂಪಿಸುತ್ತೇವೆ. ಅಭಿವೃದ್ಧಿ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ’ ಎಂದರು.</p>.<p>ಆಡಳಿತ ಚುಕ್ಕಾಣಿ ಹಿಡಿದರೆ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ, ಕುಟುಂಬಬದ ಯಜಮಾನ್ತಿಗೆ ಮಾಸಿಕ ₹ 2 ಸಾವಿರ, ಅನ್ನಭಾಗ್ಯದಡಿ ₹ 10 ಕೆ.ಜಿ ಅಕ್ಕಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಇವಿಷ್ಟೇ ಅಲ್ಲ ಇನ್ನಷ್ಟು ಕೊಡುಗೆಗಳು ನೀಡುತ್ತೇವೆ ಎಂದು ಆಶ್ವಾಸನೆ ನೀಡಿದರು.</p>.<p>ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಪಿಎಸ್ಐ ನೇಮಕಾತಿ, ವರ್ಗಾವಣೆ ಮೊದಲಾದ ಹಗರಣದಲ್ಲಿ ತೊಡಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನೇ ಕೇಳಿದರೆ ಏನೂ ನಡೆದೇ ಇಲ್ಲ ಎಂದು ಹೇಳುತ್ತಾರೆ ಎಂದು ದೂರಿದರು.</p>.<p>‘ನಾನು ಇಂಧನ ಸಚಿವನಾಗಿದ್ದಾಗ ವಿವಿಧ ಹುದ್ದೆಗಳಿಗೆ 25 ಸಾವಿರ ಮಂದಿ ನೇಮಕಾತಿ ನಡೆದಿದೆ. ಒಬ್ಬರೇ ಒಬ್ಬರಿಂದ ಹಣ ತೆಗೆದುಕೊಂಡಿದ್ದೇನೆ ಎಂದು ಸಾಬೀತು ಪಡಿಸಿದರೆ ರಾಜಕಿಯ ನಿವೃತ್ತಿ ಪಡೆಯುತ್ತೇನೆ’ ಎಂದು ಸವಾಲು ಹಾಕಿದರು.</p>.<p>ರೈತರ ಆದಾಯ ದ್ವಿಗುಣಗೊಳಿಸುದಾಗಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ನಿಗದಿಪಪಿಡುಸುವುದಾಗಿ ಬಿಜೆಪಿ ಹೇಳಿತ್ತು. ಈ ಡಬಲ್ ಎಂಜಿನ್ ಸರ್ಕಾರ ಯಾವುದನ್ನೂ ಮಾಡಿಲ್ಲ. ಬಿಜೆಪಿ ಸರ್ಕಾರುವ ಲಂಚ, ಭ್ರಷ್ಟ ಮತ್ತು ‘ಬಿ’ ರಿಪೋರ್ಟ್ ಸರ್ಕಾರ’ ಎಂದು ಟೀಕಿಸಿದರು.</p>.<p>ಮಲೆನಾಡಿನ ಜನರು ನಮಗೂ ಒಂದು ಅವಕಾಶ ಕೊಡಿ, ನಾನೂ ನಿಮ್ಮವನೇ ತಾನೇ? ನಿಮ್ಮೂರಿನಲ್ಲಿ ನೆಂಟಸ್ತನ ಮಾಡಿದ್ದೀನಿ ತಾನೇ? ನಮಗೂ ಆಶೀರ್ವಾದ ಮಾಡಿ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೋರಿದರು.</p>.<p>ಕೋಟ್</p>.<p>ಟಿಕೆಟ್ ಇಲ್ಲದವರಿಗೆ ಒಂದೊಂದು ಸ್ಥಾನ ಕೊಡುತ್ತೇವೆ. ಪಕ್ಷವನ್ನು ಗೆಲ್ಲಿಸಬೇಕು. ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷ ಹೇಳಿದಂತೆ ಕೇಳಿ, ಗೆಲುವಿಗೆ ಶ್ರಮಿಸಬೇಕು.</p>.<p>ಡಿ.ಕೆ.ಶಿವಕುಮಾರ್, ಅಧ್ಯಕ್ಷ, ಕೆಪಿಸಿಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>