<p><strong>ಕಡೂರು (ಚಿಕ್ಕಮಗಳೂರು): </strong>ಈ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಪ್ರಕ್ರಿಯೆ ಆರಂಭಕ್ಕೆ ತಿಂಗಳೊಳಗೆ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾರಂಭದಲ್ಲಿ ಅವರು ಮಾತನಾಡಿದರು. ಬಜೆಟ್ನಲ್ಲಿ ಜಿಲ್ಲೆಗೆ ಪ್ರತ್ಯೇಕ</p>.<p>ಹಾಲು ಒಕ್ಕೂಟ ಸ್ಥಾಪನೆ ಘೋಷಣೆ ಮಾಡಲಾಗಿತ್ತು. ಒಕ್ಕೂಟ ಸ್ಥಾಪಿಸಿದರೆ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎಂದರು.</p>.<p>ಜಿಲ್ಲೆಯ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಮೊದಲ ಹಂತಕ್ಕೆ ಅನುದಾನ ಮಂಜೂರು ಮಾಡಲಾಗಿದೆ. ಎರಡನೇ ಹಂತಕ್ಕೆ ಅನುಮೋದನೆ ನೀಡಲಾಗಿದೆ. ಮೂರನೇ ಹಂತಕ್ಕೂ ಅನುಮೋದನೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.</p>.<p>ಅತಿವೃಷ್ಟಿ ಹಾನಿಗೆ ಒಂದೂವರೆ ತಿಂಗಳಲ್ಲಿ ಪರಿಹಾರ ನೀಡಿದ್ದೇವೆ. ಈ ಜಿಲ್ಲೆಗೂ ಬೆಳೆ ಹಾನಿ ಪರಿಹಾರ ಶೇ 99 ಬಿಡುಗಡೆಯಾಗಿದೆ. ಬೆಳ್ಳಿಪ್ರಕಾಶ್ ಅವರು</p>.<p>ಅಪೆಕ್ಸ್ ಬ್ಯಾಂಕ್ ಮೂಲಕ 32 ಲಕ್ಷ ರೈತರಿಗೆ ₹ 20 ಸಾವಿರ ಕೋಟಿ ಸಾಲ ಒದಗಿಸಿದ್ದಾರೆ ಎಂದು ತಿಳಿಸಿದರು.</p>.<p>ಜಲಜೀವನ್ ಮಿಷನ್ ಯೋಜನೆ ಯಡಿ ಎರಡು ವರ್ಷಗಳಲ್ಲಿ 30 ಲಕ್ಷ ಮನೆಗಳಿಗೆ ನೀರು ಒದಗಿಸಲಾಗಿದೆ. ಈ ಯೋಜನೆಗೆ ಸರ್ಕಾರ 9 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ರಾಜ್ಯದಲ್ಲಿ ಒಂದು ವರ್ಷದಲ್ಲಿ ಎಂಟು ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದೇವೆ ಎಂದರು.</p>.<p>ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಕಾಂಗ್ರೆಸ್ನವರ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ದೂರಿದರು.</p>.<p>ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು ಎಂಬ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ 40 ವರ್ಷಗಳ ಬೇಡಿಕೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈಡೇರಿಸಿದೆ. ದೀನ ದಲಿತರಿಗೆ ಸ್ಪಂದಿಸಿದೆ. ಆರ್ಥಿಕ ಹಿಂದುಳಿದವರಿಗೂ ಶೇ 10 ಮೀಸಲಾತಿ ಕಲ್ಪಿಸಿದೆ ಎಂದರು.</p>.<p>20 ಸಾವಿರ ಕುರಿಗಾರರ ಸಂಘಗಳಿಗೆ 20 ಕುರಿ, ಒಂದು ಮೇಕೆ ಒದಗಿಸಲು ₹ 354 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ತಾಂಡ್ಯಗಳವರಿಗೆ ಹಕ್ಕುಪತ್ರ ನೀಡಲು ಕ್ರಮ ವಹಿಸಿದ್ದೇವೆ ಎಂದು ಹೇಳಿದರು.</p>.<p class="Subhead">ನೀರು ಹಂಚಿಕೆಗೆ ಮೊರೆ: ಭದ್ರಾ ಜಲಾಶಯದಿಂದ ಈ ಭಾಗಕ್ಕೆ ಇನ್ನೊಂದು ಟಿಎಂಸಿ ನೀರು ಹಂಚಿಕೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ವಹಿಸಬೇಕು ಎಂದು ಶಾಸಕ ಬೆಳ್ಳಿ ಪ್ರಕಾಶ್ ಕೋರಿದರು.</p>.<p>ಕಡೂರು ಬರದ ನಾಡು. ₹ 1200 ಕೋಟಿ ಭದ್ರಾ ಉಪಕಣಿವೆ ಯೋಜನೆಗೆ ಅನುಮೋದನೆ ನೀಡಿ ಯಡಿಯೂರಪ್ಪ ಉಪಕರಿಸಿದರು. ₹ 400 ಕೋಟಿ ಮೊತ್ತದ ಮೊದಲ ಹಂತದ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಎರಡನೇ ಹಂತಕ್ಕೂ ಚಾಲನೆ ದೊರೆಯಲಿದೆ. ಭದ್ರಾ ನದಿಯಿಂದ ₹1829 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಜನವಸತಿಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. 21 ಚೆಕ್ ಡ್ಯಾಂ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು (ಚಿಕ್ಕಮಗಳೂರು): </strong>ಈ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಪ್ರಕ್ರಿಯೆ ಆರಂಭಕ್ಕೆ ತಿಂಗಳೊಳಗೆ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾರಂಭದಲ್ಲಿ ಅವರು ಮಾತನಾಡಿದರು. ಬಜೆಟ್ನಲ್ಲಿ ಜಿಲ್ಲೆಗೆ ಪ್ರತ್ಯೇಕ</p>.<p>ಹಾಲು ಒಕ್ಕೂಟ ಸ್ಥಾಪನೆ ಘೋಷಣೆ ಮಾಡಲಾಗಿತ್ತು. ಒಕ್ಕೂಟ ಸ್ಥಾಪಿಸಿದರೆ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎಂದರು.</p>.<p>ಜಿಲ್ಲೆಯ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಮೊದಲ ಹಂತಕ್ಕೆ ಅನುದಾನ ಮಂಜೂರು ಮಾಡಲಾಗಿದೆ. ಎರಡನೇ ಹಂತಕ್ಕೆ ಅನುಮೋದನೆ ನೀಡಲಾಗಿದೆ. ಮೂರನೇ ಹಂತಕ್ಕೂ ಅನುಮೋದನೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.</p>.<p>ಅತಿವೃಷ್ಟಿ ಹಾನಿಗೆ ಒಂದೂವರೆ ತಿಂಗಳಲ್ಲಿ ಪರಿಹಾರ ನೀಡಿದ್ದೇವೆ. ಈ ಜಿಲ್ಲೆಗೂ ಬೆಳೆ ಹಾನಿ ಪರಿಹಾರ ಶೇ 99 ಬಿಡುಗಡೆಯಾಗಿದೆ. ಬೆಳ್ಳಿಪ್ರಕಾಶ್ ಅವರು</p>.<p>ಅಪೆಕ್ಸ್ ಬ್ಯಾಂಕ್ ಮೂಲಕ 32 ಲಕ್ಷ ರೈತರಿಗೆ ₹ 20 ಸಾವಿರ ಕೋಟಿ ಸಾಲ ಒದಗಿಸಿದ್ದಾರೆ ಎಂದು ತಿಳಿಸಿದರು.</p>.<p>ಜಲಜೀವನ್ ಮಿಷನ್ ಯೋಜನೆ ಯಡಿ ಎರಡು ವರ್ಷಗಳಲ್ಲಿ 30 ಲಕ್ಷ ಮನೆಗಳಿಗೆ ನೀರು ಒದಗಿಸಲಾಗಿದೆ. ಈ ಯೋಜನೆಗೆ ಸರ್ಕಾರ 9 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ರಾಜ್ಯದಲ್ಲಿ ಒಂದು ವರ್ಷದಲ್ಲಿ ಎಂಟು ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದೇವೆ ಎಂದರು.</p>.<p>ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಕಾಂಗ್ರೆಸ್ನವರ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ದೂರಿದರು.</p>.<p>ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು ಎಂಬ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ 40 ವರ್ಷಗಳ ಬೇಡಿಕೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈಡೇರಿಸಿದೆ. ದೀನ ದಲಿತರಿಗೆ ಸ್ಪಂದಿಸಿದೆ. ಆರ್ಥಿಕ ಹಿಂದುಳಿದವರಿಗೂ ಶೇ 10 ಮೀಸಲಾತಿ ಕಲ್ಪಿಸಿದೆ ಎಂದರು.</p>.<p>20 ಸಾವಿರ ಕುರಿಗಾರರ ಸಂಘಗಳಿಗೆ 20 ಕುರಿ, ಒಂದು ಮೇಕೆ ಒದಗಿಸಲು ₹ 354 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ತಾಂಡ್ಯಗಳವರಿಗೆ ಹಕ್ಕುಪತ್ರ ನೀಡಲು ಕ್ರಮ ವಹಿಸಿದ್ದೇವೆ ಎಂದು ಹೇಳಿದರು.</p>.<p class="Subhead">ನೀರು ಹಂಚಿಕೆಗೆ ಮೊರೆ: ಭದ್ರಾ ಜಲಾಶಯದಿಂದ ಈ ಭಾಗಕ್ಕೆ ಇನ್ನೊಂದು ಟಿಎಂಸಿ ನೀರು ಹಂಚಿಕೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ವಹಿಸಬೇಕು ಎಂದು ಶಾಸಕ ಬೆಳ್ಳಿ ಪ್ರಕಾಶ್ ಕೋರಿದರು.</p>.<p>ಕಡೂರು ಬರದ ನಾಡು. ₹ 1200 ಕೋಟಿ ಭದ್ರಾ ಉಪಕಣಿವೆ ಯೋಜನೆಗೆ ಅನುಮೋದನೆ ನೀಡಿ ಯಡಿಯೂರಪ್ಪ ಉಪಕರಿಸಿದರು. ₹ 400 ಕೋಟಿ ಮೊತ್ತದ ಮೊದಲ ಹಂತದ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಎರಡನೇ ಹಂತಕ್ಕೂ ಚಾಲನೆ ದೊರೆಯಲಿದೆ. ಭದ್ರಾ ನದಿಯಿಂದ ₹1829 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಜನವಸತಿಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. 21 ಚೆಕ್ ಡ್ಯಾಂ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>