ಹಾಸನ: ‘ಎರಡೂ ರಾಷ್ಟ್ರೀಯ ಪಕ್ಷಗಳನ್ನು ಸೋಲಿಸಿ ಜಾತ್ಯತೀತ ಜನತಾದಳ ‘ಎ’ ಟೀಂ ಆಗಿ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಕಾಸ ಪರ್ವದಲ್ಲಿ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಜಿಲ್ಲೆಯ ಸ್ಥಳೀಯ ಸಮಸ್ಯೆಗಳಾದ ತೆಂಗು, ಅಡಿಕೆ, ಆಲೂಗೆಡ್ಡೆ, ಶುಂಠಿ ಬೆಳೆ ನಾಶಕ್ಕೆ ಪರಿಹಾರ ಹೇಳಲಿಲ್ಲ. ಸ್ಥಳೀಯ ನಾಯಕರ ಸಿದ್ದ ಭಾಷಣ ಓದಿಕೊಂಡು ಜಿಎಡಿಎಸ್ ಅನ್ನು ಟೀಕಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.